Andolana originals

ಓದುಗರ ಪತ್ರ: ಚಾಮುಂಡೇಶ್ವರಿ ದರ್ಶನ ವಿಶೇಷ ಪ್ಯಾಕೇಜ್ ದರ ಇಳಿಸಿ

ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಗರ ಅನಿಸಿಕೊಂಡಿರುವ ಮೈಸೂರಿನಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ದೇವಾಲಯಗಳು, ವನ್ಯ ಸಂಪತ್ತು, ಹಲವು ಜಲಾಶಯಗಳು ಮುಕುಟಪ್ರಾಯದಂತಿವೆ. ಇವುಗಳಲ್ಲಿ ಪ್ರಮುಖವಾಗಿ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಷಾಢ ವಿಶೇಷ ಪೂಜೆಗಳು ಇನ್ನೇನು ಆರಂಭವಾಗಲಿವೆ. ಇದಕ್ಕಾಗಿ ರಾಜ್ಯ ಸರ್ಕಾರ ಚಾಮುಂಡೇಶ್ವರಿ ದೇವಾಲಯದಲ್ಲಿ ಜೂನ್ ೪,೧೧ ಹಾಗೂ ೧೮ ರಂದು ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಿದೆ. ಜೂನ್ ೧೭ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ನಡೆಯಲಿದ್ದು ಶ್ರೀಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ,ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸರ್ವ ಸಿದ್ಧತೆ ಮಾಡಲಾಗಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ದೇವಿಯ ನೇರ ದರ್ಶನ ಪಡೆಯಲು ೨,೦೦೦ ರೂ. ವಿಶೇಷ ಪ್ಯಾಕೇಜ್ ನಿಗದಿ ಮಾಡಲಾಗಿದೆ. ಇದು ಸಾಮಾನ್ಯ ಜನರಿಗೆ ಹೊರೆಯಾಗುತ್ತದೆ. ಆದ್ದರಿಂದ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದವರು ನಿಗದಿಗೊಳಿಸಿರುವ ೨,೦೦೦ ರೂಗಳ ಪ್ಯಾಕೇಜ್ ದರವನ್ನು ಕಡಿಮೆ ಮಾಡಿದರೆ ಸಾಮಾನ್ಯ ವರ್ಗದ ಜನರಿಗೆ ಅನು ಕೂಲವಾಗುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

2 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

2 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago