Andolana originals

ಓದುಗರ ಪತ್ರ: ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಬೇಡ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ ಮಣಿದು ಅವರಿಗೆ ಲಾಭ ಮಾಡಿಕೊಡಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವುದು ಖಂಡನೀಯ. ಸರ್ಕಾರಿ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಅವರಿಗಾಗಿಯೇ ತೆರೆದಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವುದು ಸರಿಯಲ್ಲ. ದುಪ್ಪಟ್ಟು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತರು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳುತ್ತಾರೆ. ಆದರೆ ಬಡವರು ಹೆಚ್ಚಿನ ಹಣವನ್ನು ಕೊಟ್ಟು ಖರೀದಿಸಲು ಸಾಧ್ಯವಾಗದೇ ಹೆಣಗಾಡುತ್ತಾರೆ. ಸರ್ಕಾರದ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಷ್ಟೆ . ಆದರೆ ಕೇಂದ್ರ ಸರ್ಕಾರದ ಯೋಜನೆ ಯಾಗಿರುವುದರಿಂದ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಮುಚ್ಚಲು ರಾಜ್ಯ ಸರ್ಕಾರ ಸಂಚುರೂಪಿಸುತ್ತಿದೆ ಎಂದು ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಕೂಗು ಕೇಳಿ ಬರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆದು ಎಂದಿನಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಬೇಕು.

– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

 

ಆಂದೋಲನ ಡೆಸ್ಕ್

Recent Posts

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

43 mins ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

2 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

2 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

2 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

2 hours ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

2 hours ago