Andolana originals

ಓದುಗರ ಪತ್ರ: ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಬೇಡ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ ಮಣಿದು ಅವರಿಗೆ ಲಾಭ ಮಾಡಿಕೊಡಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವುದು ಖಂಡನೀಯ. ಸರ್ಕಾರಿ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಅವರಿಗಾಗಿಯೇ ತೆರೆದಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವುದು ಸರಿಯಲ್ಲ. ದುಪ್ಪಟ್ಟು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತರು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳುತ್ತಾರೆ. ಆದರೆ ಬಡವರು ಹೆಚ್ಚಿನ ಹಣವನ್ನು ಕೊಟ್ಟು ಖರೀದಿಸಲು ಸಾಧ್ಯವಾಗದೇ ಹೆಣಗಾಡುತ್ತಾರೆ. ಸರ್ಕಾರದ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಷ್ಟೆ . ಆದರೆ ಕೇಂದ್ರ ಸರ್ಕಾರದ ಯೋಜನೆ ಯಾಗಿರುವುದರಿಂದ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಮುಚ್ಚಲು ರಾಜ್ಯ ಸರ್ಕಾರ ಸಂಚುರೂಪಿಸುತ್ತಿದೆ ಎಂದು ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಕೂಗು ಕೇಳಿ ಬರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆದು ಎಂದಿನಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಬೇಕು.

– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

4 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago