Andolana originals

ಓದುಗರ ಪತ್ರ: ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಬೇಡ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜನೌಷಧಿ ಕೇಂದ್ರಗಳೂ ಒಂದಾಗಿದ್ದು, ಬಡವರಿಗೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಔಷಧಿಗಳು ಕೈಗೆಟುಕುವ ದರದಲ್ಲಿ ಸಿಗುತ್ತಿದ್ದು, ಈ ಕೇಂದ್ರಗಳು ಬಡವರಿಗೆ ವರದಾನವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೆಲವು ಔಷಧಿ ಕಂಪೆನಿಗಳ ಒತ್ತಡಕ್ಕೆ ಮಣಿದು ಅವರಿಗೆ ಲಾಭ ಮಾಡಿಕೊಡಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವುದು ಖಂಡನೀಯ. ಸರ್ಕಾರಿ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಅವರಿಗಾಗಿಯೇ ತೆರೆದಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವುದು ಸರಿಯಲ್ಲ. ದುಪ್ಪಟ್ಟು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತರು ಹಣವನ್ನು ಕೊಟ್ಟು ಔಷಧಿ ಕೊಂಡುಕೊಳ್ಳುತ್ತಾರೆ. ಆದರೆ ಬಡವರು ಹೆಚ್ಚಿನ ಹಣವನ್ನು ಕೊಟ್ಟು ಖರೀದಿಸಲು ಸಾಧ್ಯವಾಗದೇ ಹೆಣಗಾಡುತ್ತಾರೆ. ಸರ್ಕಾರದ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗಬೇಕಷ್ಟೆ . ಆದರೆ ಕೇಂದ್ರ ಸರ್ಕಾರದ ಯೋಜನೆ ಯಾಗಿರುವುದರಿಂದ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಮುಚ್ಚಲು ರಾಜ್ಯ ಸರ್ಕಾರ ಸಂಚುರೂಪಿಸುತ್ತಿದೆ ಎಂದು ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಕೂಗು ಕೇಳಿ ಬರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ಹಿಂಪಡೆದು ಎಂದಿನಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಬೇಕು.

– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

 

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago