ಓದುಗರ ಪತ್ರ
ಕನ್ನಡ ಭಾಷೆ ಹುಟ್ಟಿದ್ದೇ ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರು, ಇದಕ್ಕಾಗಿ ಕನ್ನಡಿಗರ ಕ್ಷಮೆ ಕೇಳುವುದಿಲ್ಲ, ನಾನು ಹೇಳಿದ್ದು ಸರಿ ಇದೆ ಎಂದು ಸಮರ್ಥನೆ ಮಾಡಿಕೊಂಡಿರುವುದು ಅವರ ಉದ್ಧಟತನದ ಪರಮಾವಧಿಯಾಗಿದೆ.
ಅವರು ಮೊದಲು ಕನ್ನಡ ಭಾಷೆಯ ಇತಿಹಾಸವನ್ನು ತಿಳಿಯಬೇಕು, ಕನ್ನಡ ಭಾಷೆಗೆ ಸುಮಾರು ೨೫೦೦ ವರ್ಷಗಳಷ್ಟು ಇತಿಹಾಸವಿದೆ, ಅಲ್ಲದೆ ಪ್ರಾಚೀನ ಭಾಷೆಯಾಗಿದೆ.
ಹಿಂದಿ,ಇಂಗ್ಲಿಷ್ ಆನಂತರದಲ್ಲಿ ಹುಟ್ಟಿದ ಭಾಷೆಗಳು. ಕನ್ನಡ ಭಾಷೆಯ ಬಗ್ಗೆ ಅವರಿಗೆ ಅರಿವಿಲ್ಲದೆ ಇದ್ದರೆ ಕನ್ನಡದ ವಿದ್ವಾಂಸರಿಂದ ಈ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ. ಈಗಾಗಲೇ ರಾಜ್ಯಾದ್ಯಂತ ಕಮಲ್ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಜನಾಭಿಪ್ರಾಯವನ್ನು ಗೌರವಿಸಿ, ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವುದು ಅವರಿಗೂ ಗೌರವ. ಇಂತಹ ಅಪ್ರಬುದ್ಧ ಹೇಳಿಕೆಗಳನ್ನು ನೀಡಿ, ಭಾಷೆಯ ಹೆಸರಿನಲ್ಲಿ ಎರಡೂ ರಾಜ್ಯಗಳಲ್ಲಿ ಅಶಾಂತಿ ಸೃಷ್ಟಿಸಿ,ಸಾಮರಸ್ಯ ಹಾಳುಗೆಡಹುವುದು ಅವರಿಗೆ ತರವಲ್ಲ. ಉದ್ಧಟತನವನ್ನು ಬಿಟ್ಟು ದ್ರಾವಿಡ ಭಾಷೆಗಳೆಲ್ಲವೂ ಸೋದರ ಭಾಷೆಗಳೆಂಬುದನ್ನು ಅರಿತು, ಅವರು ಕ್ಷಮೆ ಯಾಚಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…