ಓದುಗರ ಪತ್ರ
ಕನ್ನಡ ಭಾಷೆ ಹುಟ್ಟಿದ್ದೇ ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರು, ಇದಕ್ಕಾಗಿ ಕನ್ನಡಿಗರ ಕ್ಷಮೆ ಕೇಳುವುದಿಲ್ಲ, ನಾನು ಹೇಳಿದ್ದು ಸರಿ ಇದೆ ಎಂದು ಸಮರ್ಥನೆ ಮಾಡಿಕೊಂಡಿರುವುದು ಅವರ ಉದ್ಧಟತನದ ಪರಮಾವಧಿಯಾಗಿದೆ.
ಅವರು ಮೊದಲು ಕನ್ನಡ ಭಾಷೆಯ ಇತಿಹಾಸವನ್ನು ತಿಳಿಯಬೇಕು, ಕನ್ನಡ ಭಾಷೆಗೆ ಸುಮಾರು ೨೫೦೦ ವರ್ಷಗಳಷ್ಟು ಇತಿಹಾಸವಿದೆ, ಅಲ್ಲದೆ ಪ್ರಾಚೀನ ಭಾಷೆಯಾಗಿದೆ.
ಹಿಂದಿ,ಇಂಗ್ಲಿಷ್ ಆನಂತರದಲ್ಲಿ ಹುಟ್ಟಿದ ಭಾಷೆಗಳು. ಕನ್ನಡ ಭಾಷೆಯ ಬಗ್ಗೆ ಅವರಿಗೆ ಅರಿವಿಲ್ಲದೆ ಇದ್ದರೆ ಕನ್ನಡದ ವಿದ್ವಾಂಸರಿಂದ ಈ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ. ಈಗಾಗಲೇ ರಾಜ್ಯಾದ್ಯಂತ ಕಮಲ್ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಜನಾಭಿಪ್ರಾಯವನ್ನು ಗೌರವಿಸಿ, ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವುದು ಅವರಿಗೂ ಗೌರವ. ಇಂತಹ ಅಪ್ರಬುದ್ಧ ಹೇಳಿಕೆಗಳನ್ನು ನೀಡಿ, ಭಾಷೆಯ ಹೆಸರಿನಲ್ಲಿ ಎರಡೂ ರಾಜ್ಯಗಳಲ್ಲಿ ಅಶಾಂತಿ ಸೃಷ್ಟಿಸಿ,ಸಾಮರಸ್ಯ ಹಾಳುಗೆಡಹುವುದು ಅವರಿಗೆ ತರವಲ್ಲ. ಉದ್ಧಟತನವನ್ನು ಬಿಟ್ಟು ದ್ರಾವಿಡ ಭಾಷೆಗಳೆಲ್ಲವೂ ಸೋದರ ಭಾಷೆಗಳೆಂಬುದನ್ನು ಅರಿತು, ಅವರು ಕ್ಷಮೆ ಯಾಚಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…