Andolana originals

ಓದುಗರ ಪತ್ರ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ನಿರ್ಲಕ್ಷಿಸದಿರಿ

ಕೆಲವು ಖಾಸಗಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ನಿರ್ಲಕ್ಷಿಸಲಾಗುತ್ತಿದೆ. ೮ನೇ ತರಗತಿಗೆ ದುಬಾರಿ ಶುಲ್ಕ ಪಾವತಿಸಿಕೊಂಡು ದಾಖಲಿಸಿಕೊಳ್ಳುವ ಶಿಕ್ಷಣ ಸಂಸ್ಥೆಗಳು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಯುತ್ತಲೇ ೯ನೇ ತರಗತಿಯ ನಂತರ ೧೦ನೇ ತರಗತಿಗೆ ಬೇರೆ ಶಾಲೆಗಳಿಗೆ ಅದರಲ್ಲೂ ಮುಖ್ಯವಾಗಿ ಸಮೀಪವಿರುವ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಪತ್ರ ಕೊಟ್ಟು ಸಾಗ ಹಾಕುತ್ತಾರೆ. ಇದನ್ನು ಪ್ರಶ್ನಿಸಿದರೆ ೯ನೇ ತರಗತಿಯಲ್ಲೇ ಫೇಲ್ ಮಾಡುತ್ತೇವೆ. ಇನ್ನೂ ಒಂದು ವರ್ಷ ಇಲ್ಲೇ ಓದಬೇಕು ಎಂದು ಷರತ್ತನ್ನೂ ವಿಧಿಸುತ್ತಾರೆ.  ಸರ್ಕಾರದ ನಿಯಮಾನುಸಾರ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಪರಿಹಾರ ಬೋಧನೆ ಕೈಗೊಳ್ಳುವ ಮೂಲಕ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಆದರೆ ಕೇವಲ ಅಂಕ ಗಳಿಕೆ ಹಾಗೂ ರ‍್ಯಾಂಕ್ ಹಿಂದೆ ಬಿದ್ದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನೇ ಮರೆತಿರುವುದು ವಿಪರ್ಯಾಸ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನುಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಲಕ್ಷಿಸುವ ಪ್ರಕರಣಗಳು ಕಂಡು ಬಂದರೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಅಧಿಕಾರಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಮೌನ ವಹಿಸುತ್ತಿರುವುದೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.ವಿದ್ಯಾರ್ಥಿಗಳನ್ನು ಶಿಕ್ಷಣದ ಮಾನದಂಡದಿಂದಲೇ ಅಳೆಯುವುದು ತಪ್ಪು. ಯಾವುದೇ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿದ್ದರೂ, ಚಿತ್ರಕಲೆ, ಸಂಗೀತ, ಕರ ಕುಶಲ ಕಲೆ, ಅಭಿನಯ ಮೊದಲಾದ ವಿಷಯಗಳಲ್ಲಿ ಆಸಕ್ತಿ ಹೊಂದಿರಬಹುದು. ಆದರೆ ಇದಕ್ಕೆ ಪ್ರೋತ್ಸಾಹಿಸಬೇಕಾದವರೇ ತಾತ್ಸಾರ ಮಾಡಿದರೆ ಹೇಗೆ? ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದಾದರೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪರಿಹಾರ ಬೋಧನೆಗೆವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಆಸಕ್ತಿ ವಹಿಸಬೇಕಿದೆ.

ಎಸ್. ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

13 mins ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

44 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

59 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

1 hour ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

1 hour ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

2 hours ago