Andolana originals

ಓದುಗರ ಪತ್ರ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ನಿರ್ಲಕ್ಷಿಸದಿರಿ

ಕೆಲವು ಖಾಸಗಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ನಿರ್ಲಕ್ಷಿಸಲಾಗುತ್ತಿದೆ. ೮ನೇ ತರಗತಿಗೆ ದುಬಾರಿ ಶುಲ್ಕ ಪಾವತಿಸಿಕೊಂಡು ದಾಖಲಿಸಿಕೊಳ್ಳುವ ಶಿಕ್ಷಣ ಸಂಸ್ಥೆಗಳು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಯುತ್ತಲೇ ೯ನೇ ತರಗತಿಯ ನಂತರ ೧೦ನೇ ತರಗತಿಗೆ ಬೇರೆ ಶಾಲೆಗಳಿಗೆ ಅದರಲ್ಲೂ ಮುಖ್ಯವಾಗಿ ಸಮೀಪವಿರುವ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಪತ್ರ ಕೊಟ್ಟು ಸಾಗ ಹಾಕುತ್ತಾರೆ. ಇದನ್ನು ಪ್ರಶ್ನಿಸಿದರೆ ೯ನೇ ತರಗತಿಯಲ್ಲೇ ಫೇಲ್ ಮಾಡುತ್ತೇವೆ. ಇನ್ನೂ ಒಂದು ವರ್ಷ ಇಲ್ಲೇ ಓದಬೇಕು ಎಂದು ಷರತ್ತನ್ನೂ ವಿಧಿಸುತ್ತಾರೆ.  ಸರ್ಕಾರದ ನಿಯಮಾನುಸಾರ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಪರಿಹಾರ ಬೋಧನೆ ಕೈಗೊಳ್ಳುವ ಮೂಲಕ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಆದರೆ ಕೇವಲ ಅಂಕ ಗಳಿಕೆ ಹಾಗೂ ರ‍್ಯಾಂಕ್ ಹಿಂದೆ ಬಿದ್ದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನೇ ಮರೆತಿರುವುದು ವಿಪರ್ಯಾಸ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನುಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಲಕ್ಷಿಸುವ ಪ್ರಕರಣಗಳು ಕಂಡು ಬಂದರೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಅಧಿಕಾರಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಮೌನ ವಹಿಸುತ್ತಿರುವುದೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.ವಿದ್ಯಾರ್ಥಿಗಳನ್ನು ಶಿಕ್ಷಣದ ಮಾನದಂಡದಿಂದಲೇ ಅಳೆಯುವುದು ತಪ್ಪು. ಯಾವುದೇ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿದ್ದರೂ, ಚಿತ್ರಕಲೆ, ಸಂಗೀತ, ಕರ ಕುಶಲ ಕಲೆ, ಅಭಿನಯ ಮೊದಲಾದ ವಿಷಯಗಳಲ್ಲಿ ಆಸಕ್ತಿ ಹೊಂದಿರಬಹುದು. ಆದರೆ ಇದಕ್ಕೆ ಪ್ರೋತ್ಸಾಹಿಸಬೇಕಾದವರೇ ತಾತ್ಸಾರ ಮಾಡಿದರೆ ಹೇಗೆ? ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದಾದರೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪರಿಹಾರ ಬೋಧನೆಗೆವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಆಸಕ್ತಿ ವಹಿಸಬೇಕಿದೆ.

ಎಸ್. ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago