ಓದುಗರ ಪತ್ರ
ಕೆಲವು ಖಾಸಗಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ನಿರ್ಲಕ್ಷಿಸಲಾಗುತ್ತಿದೆ. ೮ನೇ ತರಗತಿಗೆ ದುಬಾರಿ ಶುಲ್ಕ ಪಾವತಿಸಿಕೊಂಡು ದಾಖಲಿಸಿಕೊಳ್ಳುವ ಶಿಕ್ಷಣ ಸಂಸ್ಥೆಗಳು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಯುತ್ತಲೇ ೯ನೇ ತರಗತಿಯ ನಂತರ ೧೦ನೇ ತರಗತಿಗೆ ಬೇರೆ ಶಾಲೆಗಳಿಗೆ ಅದರಲ್ಲೂ ಮುಖ್ಯವಾಗಿ ಸಮೀಪವಿರುವ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಪತ್ರ ಕೊಟ್ಟು ಸಾಗ ಹಾಕುತ್ತಾರೆ. ಇದನ್ನು ಪ್ರಶ್ನಿಸಿದರೆ ೯ನೇ ತರಗತಿಯಲ್ಲೇ ಫೇಲ್ ಮಾಡುತ್ತೇವೆ. ಇನ್ನೂ ಒಂದು ವರ್ಷ ಇಲ್ಲೇ ಓದಬೇಕು ಎಂದು ಷರತ್ತನ್ನೂ ವಿಧಿಸುತ್ತಾರೆ. ಸರ್ಕಾರದ ನಿಯಮಾನುಸಾರ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಪರಿಹಾರ ಬೋಧನೆ ಕೈಗೊಳ್ಳುವ ಮೂಲಕ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಆದರೆ ಕೇವಲ ಅಂಕ ಗಳಿಕೆ ಹಾಗೂ ರ್ಯಾಂಕ್ ಹಿಂದೆ ಬಿದ್ದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನೇ ಮರೆತಿರುವುದು ವಿಪರ್ಯಾಸ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನುಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಲಕ್ಷಿಸುವ ಪ್ರಕರಣಗಳು ಕಂಡು ಬಂದರೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಅಧಿಕಾರಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಮೌನ ವಹಿಸುತ್ತಿರುವುದೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.ವಿದ್ಯಾರ್ಥಿಗಳನ್ನು ಶಿಕ್ಷಣದ ಮಾನದಂಡದಿಂದಲೇ ಅಳೆಯುವುದು ತಪ್ಪು. ಯಾವುದೇ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿದ್ದರೂ, ಚಿತ್ರಕಲೆ, ಸಂಗೀತ, ಕರ ಕುಶಲ ಕಲೆ, ಅಭಿನಯ ಮೊದಲಾದ ವಿಷಯಗಳಲ್ಲಿ ಆಸಕ್ತಿ ಹೊಂದಿರಬಹುದು. ಆದರೆ ಇದಕ್ಕೆ ಪ್ರೋತ್ಸಾಹಿಸಬೇಕಾದವರೇ ತಾತ್ಸಾರ ಮಾಡಿದರೆ ಹೇಗೆ? ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದಾದರೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪರಿಹಾರ ಬೋಧನೆಗೆವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಆಸಕ್ತಿ ವಹಿಸಬೇಕಿದೆ.
ಎಸ್. ಶರತ್, ಮೈಸೂರು
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…