ಓದುಗರ ಪತ್ರ
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್ಹೋಲ್ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ದುರ್ವಾಸನೆ ಯಿಂದ ಮೂಗು ಮುಚ್ಚಿ ಕೊಂಡೇ ಓಡಾಡು ವಂತಾಗಿದೆ. ಸಾರ್ವಜನಿಕರು ಮೈಸೂರು ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸುವ ಪ್ರಯತ್ನ ಮಾಡಿದರಾದರೂ ಆಯುಕ್ತರು ಕರೆ ಸ್ವೀಕರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಚಿತ್ರಗಳನ್ನು ಕಳುಹಿಸಿದರೂ ಕ್ರಮ ವಹಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಈಗಲಾದರೂ ಸಂಬಂಧ ಪಟ್ಟವರು ಎಚ್ಚೆತ್ತು ಸಮಸ್ಯೆ ನಿವಾರಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಹೇಮಂತ್ಕುಮಾರ್, ಸುಣ್ಣದ ಕೇರಿ, ಮೈಸೂರು
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…