ಓದುಗರ ಪತ್ರ
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್ಹೋಲ್ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ದುರ್ವಾಸನೆ ಯಿಂದ ಮೂಗು ಮುಚ್ಚಿ ಕೊಂಡೇ ಓಡಾಡು ವಂತಾಗಿದೆ. ಸಾರ್ವಜನಿಕರು ಮೈಸೂರು ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸುವ ಪ್ರಯತ್ನ ಮಾಡಿದರಾದರೂ ಆಯುಕ್ತರು ಕರೆ ಸ್ವೀಕರಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಚಿತ್ರಗಳನ್ನು ಕಳುಹಿಸಿದರೂ ಕ್ರಮ ವಹಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಈಗಲಾದರೂ ಸಂಬಂಧ ಪಟ್ಟವರು ಎಚ್ಚೆತ್ತು ಸಮಸ್ಯೆ ನಿವಾರಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಹೇಮಂತ್ಕುಮಾರ್, ಸುಣ್ಣದ ಕೇರಿ, ಮೈಸೂರು
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…