ಓದುಗರ ಪತ್ರ
ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ ನೀರು ಸರಬರಾಜಾಗುತ್ತದೆ.
ಕೆಲವೊಮ್ಮೆ ನೀರನ್ನು ಶುದ್ಧೀಕರಿಸದೇ ಹಾಗೆಯೇ ಸರಬರಾಜು ಮಾಡುವುದರಿಂದ ಆ ನೀರು ಕೂಡ ಕುಡಿಯಲು ಯೋಗ್ಯವಾಗಿರುವುದಿಲ್ಲ.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಈ ಬಗ್ಗೆ ನೀರುಗಂಟಿಗಳನ್ನು ಕೇಳಿದರೆ ನೀವು ನೀರನ್ನು ಒಂದು ಗಂಟೆ ನಲ್ಲಿಯಿಂದ ಹರಿಯಲು ಬಿಡಿ, ಆನಂತರ ಬಳಸಿ ಎಂದು ಸಲಹೆ ನೀಡುತ್ತಾರೆ. ಈ ರೀತಿ ಗಂಟೆಗಟ್ಟಲೇ ನೀರು ಪೋಲು ಮಾಡುವ ಬದಲು ನಗರಸಭೆಯವರು ನೀರು ಶುದ್ಧೀಕರಣಕ್ಕೆ ಅಗತ್ಯವಿರುವಷ್ಟೇ ರಾಸಾಯನಿಕಗಳನ್ನು ಬಳಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಎಸ್.ಪದ್ಮಾವತಿ, ಮಂಡ್ಯ
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…