ಓದುಗರ ಪತ್ರ
ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ ನೀರು ಸರಬರಾಜಾಗುತ್ತದೆ.
ಕೆಲವೊಮ್ಮೆ ನೀರನ್ನು ಶುದ್ಧೀಕರಿಸದೇ ಹಾಗೆಯೇ ಸರಬರಾಜು ಮಾಡುವುದರಿಂದ ಆ ನೀರು ಕೂಡ ಕುಡಿಯಲು ಯೋಗ್ಯವಾಗಿರುವುದಿಲ್ಲ.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಈ ಬಗ್ಗೆ ನೀರುಗಂಟಿಗಳನ್ನು ಕೇಳಿದರೆ ನೀವು ನೀರನ್ನು ಒಂದು ಗಂಟೆ ನಲ್ಲಿಯಿಂದ ಹರಿಯಲು ಬಿಡಿ, ಆನಂತರ ಬಳಸಿ ಎಂದು ಸಲಹೆ ನೀಡುತ್ತಾರೆ. ಈ ರೀತಿ ಗಂಟೆಗಟ್ಟಲೇ ನೀರು ಪೋಲು ಮಾಡುವ ಬದಲು ನಗರಸಭೆಯವರು ನೀರು ಶುದ್ಧೀಕರಣಕ್ಕೆ ಅಗತ್ಯವಿರುವಷ್ಟೇ ರಾಸಾಯನಿಕಗಳನ್ನು ಬಳಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಎಸ್.ಪದ್ಮಾವತಿ, ಮಂಡ್ಯ
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…