ಓದುಗರ ಪತ್ರ
ಮಂಡ್ಯ (Mandya) ನಗರದ ಪಿಇಎಸ್(PES) ಕಾನೂನು ಕಾಲೇಜಿನ ರಸ್ತೆಯ ಸಮೀಪ ಇರುವ ಮನೆಗಳಿಗೆ ಮಂಡ್ಯ ನಗರಸಭೆಯಿಂದ ಶುದ್ಧ ಕುಡಿಯುವ ನೀರು (Drinking Water) ಸರಬರಾಜು ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ನೀರು ಶುದ್ಧೀಕರಣಕ್ಕೆ ಅತಿಯಾಗಿ ರಾಸಾಯನಿಕಗಳನ್ನು ಬಳಸುವುದರಿಂದ ಬಿಳಿ ಬಣ್ಣದ ನೀರು ಸರಬರಾಜಾಗುತ್ತದೆ.
ಕೆಲವೊಮ್ಮೆ ನೀರನ್ನು ಶುದ್ಧೀಕರಿಸದೇ ಹಾಗೆಯೇ ಸರಬರಾಜು ಮಾಡುವುದರಿಂದ ಆ ನೀರು ಕೂಡ ಕುಡಿಯಲು ಯೋಗ್ಯವಾಗಿರುವುದಿಲ್ಲ.
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ
ಈ ಬಗ್ಗೆ ನೀರುಗಂಟಿಗಳನ್ನು ಕೇಳಿದರೆ ನೀವು ನೀರನ್ನು ಒಂದು ಗಂಟೆ ನಲ್ಲಿಯಿಂದ ಹರಿಯಲು ಬಿಡಿ, ಆನಂತರ ಬಳಸಿ ಎಂದು ಸಲಹೆ ನೀಡುತ್ತಾರೆ. ಈ ರೀತಿ ಗಂಟೆಗಟ್ಟಲೇ ನೀರು ಪೋಲು ಮಾಡುವ ಬದಲು ನಗರಸಭೆಯವರು ನೀರು ಶುದ್ಧೀಕರಣಕ್ಕೆ ಅಗತ್ಯವಿರುವಷ್ಟೇ ರಾಸಾಯನಿಕಗಳನ್ನು ಬಳಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಎಸ್.ಪದ್ಮಾವತಿ, ಮಂಡ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…