ಓದುಗರ ಪತ್ರ
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಶಾಲೆಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗೆಗೆ ಹೆತ್ತವರು, ಸಂಬಂಧಪಟ್ಟ ಶಾಲೆಗಳು ಜಾಗ್ರತೆ ವಹಿಸಬೇಕು.
ಅನಾಹುತ ನಡೆದ ಮೇಲೆ ದುಃಖಪಡುವ ಬದಲು ಮೊದಲೇ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಮಳೆ ಆರ್ಭಟಕ್ಕೆ ರಾಜ್ಯಾದ್ಯಂತ ಸಾವು- ನೋವು, ಬೆಳೆ, ಆಸ್ತಿ ನಷ್ಟವಾಗಿವೆ. ಇನ್ನು ಮುಂಗಾರು ಬಿರುಸುಗೊಂಡರೆ ಯಾವ ಪರಿಸ್ಥಿತಿ ಉದ್ಭವಿಸಬಹುದು? ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಮನಗಾಣಬೇಕು. ಅಲ್ಲದೆ, ಮೈಸೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
-ಎಲ್.ಮಹದೇವಯ್ಯ, ರಾಮಕೃಷ್ಣನಗರ, ಮೈಸೂರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…