Andolana originals

ಓದುಗರ ಪತ್ರ: ಕಣ್ಮರೆಯಾದ ಪಾದಚಾರಿ ಮಾರ್ಗಗಳು

ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ವಿವೇಕಾನಂದ ವೃತ್ತವೂ ಸೇರಿದಂತೆ
ಶ್ರೀರಾಂಪುರದ ಭ್ರಮರಾಂಬ ಕಲ್ಯಾಣ ಮಂಟಪದ ಬಸ್ ನಿಲ್ದಾಣದವರೆಗೆ ರಸ್ತೆಯಲ್ಲಿ ಸರಿಯಾಗಿ ವಾಹನ ನಿಲುಗಡೆ ಮಾಡದೆ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಅಪಘಾತಗಳನ್ನು ತಡೆಯಲು ಕ್ರಮವಹಿಸಬೇಕು. ನಗರದ ದೇವರಾಜ ಅರಸು ರಸ್ತೆಯ ಒಂದು ಬದಿಯಲ್ಲಿ ಕಾರು ನಿಲುಗಡೆ, ಮತ್ತೊಂದು ಬದಿಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅನುಕೂಲವಾಗುವಂತೆ ರಸ್ತೆಗೆ ಬಿಳಿ ಬಣ್ಣದ ಗೆರೆಗಳನ್ನು ಹಾಕಿಸಲು ಸಂಚಾರ ಪೊಲೀಸರು ಕ್ರಮಕೈಗೊಳ್ಳಬೇಕು. ಸಂಜೆ ೫ ಗಂಟೆಯಿಂದ ರಾತ್ರಿ ೧೧ರವರೆಗೆ ಈ ರಸ್ತೆಯಲ್ಲಿ ಜಾಹೀರಾತು ಫಲಕಗಳೇ ತುಂಬಿರುತ್ತವೆ. ಅಂಗಡಿಗಳವರು ತಮ್ಮ ತಮ್ಮ ಮಳಿಗೆಗಳ ಜಾಹೀರಾತು -ಲಕಗಳನ್ನು ರಸ್ತೆಯಲ್ಲಿ ಇಟ್ಟುಕೊಳ್ಳುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಮಹಾನಗರ ಪಾಲಿಕೆ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ್ದ -ಟ್ ಪಾತ್‌ಗಳು ಇಂದು ಅನುಕೂಲಕ್ಕೆ ಬಾರದೆ ವ್ಯರ್ಥವಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೇ ಕಾರಣರಾಗಿದ್ದು, ಇನ್ನು ಮುಂದಾದರೂ ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago