ಓದುಗರ ಪತ್ರ
ಮೈಸೂರು ನಗರದ ವಾರ್ಡ್ ನಂ.೫೯ರ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿರುವ ಪಾದಚಾರಿ ಮಾರ್ಗಗಳು ಕಣ್ಮರೆಯಾಗುತ್ತಿದ್ದರೂ ಮೈಸೂರು ನಗರ ಪಾಲಿಕೆಯ ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಾದಚಾರಿ ಮಾರ್ಗಗಳನ್ನು ಮಳಿಗೆ ನಡೆಸುವವರು ಬಳಕೆ ಮಾಡಿಕೊಳ್ಳುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಸಂಜೆಯ ಸಮಯ ಕುವೆಂಪುನಗರದ ಕಾಂಪ್ಲೆಕ್ಸ್ನಿಂದ ವಿವೇಕಾನಂದ ವೃತ್ತವೂ ಸೇರಿದಂತೆ
ಶ್ರೀರಾಂಪುರದ ಭ್ರಮರಾಂಬ ಕಲ್ಯಾಣ ಮಂಟಪದ ಬಸ್ ನಿಲ್ದಾಣದವರೆಗೆ ರಸ್ತೆಯಲ್ಲಿ ಸರಿಯಾಗಿ ವಾಹನ ನಿಲುಗಡೆ ಮಾಡದೆ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಅಪಘಾತಗಳನ್ನು ತಡೆಯಲು ಕ್ರಮವಹಿಸಬೇಕು. ನಗರದ ದೇವರಾಜ ಅರಸು ರಸ್ತೆಯ ಒಂದು ಬದಿಯಲ್ಲಿ ಕಾರು ನಿಲುಗಡೆ, ಮತ್ತೊಂದು ಬದಿಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅನುಕೂಲವಾಗುವಂತೆ ರಸ್ತೆಗೆ ಬಿಳಿ ಬಣ್ಣದ ಗೆರೆಗಳನ್ನು ಹಾಕಿಸಲು ಸಂಚಾರ ಪೊಲೀಸರು ಕ್ರಮಕೈಗೊಳ್ಳಬೇಕು. ಸಂಜೆ ೫ ಗಂಟೆಯಿಂದ ರಾತ್ರಿ ೧೧ರವರೆಗೆ ಈ ರಸ್ತೆಯಲ್ಲಿ ಜಾಹೀರಾತು ಫಲಕಗಳೇ ತುಂಬಿರುತ್ತವೆ. ಅಂಗಡಿಗಳವರು ತಮ್ಮ ತಮ್ಮ ಮಳಿಗೆಗಳ ಜಾಹೀರಾತು -ಲಕಗಳನ್ನು ರಸ್ತೆಯಲ್ಲಿ ಇಟ್ಟುಕೊಳ್ಳುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಮಹಾನಗರ ಪಾಲಿಕೆ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ್ದ -ಟ್ ಪಾತ್ಗಳು ಇಂದು ಅನುಕೂಲಕ್ಕೆ ಬಾರದೆ ವ್ಯರ್ಥವಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೇ ಕಾರಣರಾಗಿದ್ದು, ಇನ್ನು ಮುಂದಾದರೂ ಫುಟ್ಪಾತ್ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…