ಓದುಗರ ಪತ್ರ
ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರಒತ್ತು ನೀಡಬೇಕು. ಇಲ್ಲದಿದ್ದರೆ ಶಾಲೆಗಳು ಶುರುವಾದರೂ ಪಾಠ ಪ್ರವಚನಗಳು ನಡೆಯದಿದ್ದರೆ ಏನು ಪ್ರಯೋಜನ?
ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಶಾಲಾ ದಾಖಲಾತಿ ಆಂದೋಲನ ನಡೆಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು… ಇಂತಹ ಕಾರ್ಯಗಳನ್ನೂ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಶಿಕ್ಷಕರ ಕೊರತೆ ಇದ್ದೇ ಇರುತ್ತದೆ. ಇಂತಹ ಸಂದಿಗ್ಧತೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಒದಗಿಸುವುದು ಕಷ್ಟಸಾಧ್ಯ. ಖಾಸಗಿ ಶಾಲೆಗಳಿಗೆ ಸ್ವತಃ ಪೋಷಕರೇ ಮಕ್ಕಳನ್ನು ದಾಖಲಿಸುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಮಕ್ಕಳ ಮನೆ ಬಾಗಿಲಿಗೆ ಹೋಗುವುದು ಅನಿವಾರ್ಯ ಎಂಬಂತಾಗಿದೆ.
ಬಹಳಷ್ಟು ಕಡೆ ಏಕೋಪಾಧ್ಯಾಯ ಶಾಲೆಗಳಿವೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಯಾವ ಪೋಷಕರು ಮುಂದೆ ಬರುತ್ತಾರೆ? ಅಲ್ಲದೆ, ಶಾಲೆಗಳಲ್ಲಿ ಪಠ್ಯ ಪುಸ್ತಕಗಳು, ಸಮವಸ್ತ್ರ ಇತ್ಯಾದಿಯನ್ನು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಒದಗಿಸಬೇಕು ನಿಜ. ಆ ಜವಾಬ್ದಾರಿಯನ್ನೂ ಶಿಕ್ಷಕರ ಹೆಗಲಿಗೇ ಹಾಕುವುದು ಎಷ್ಟು ಸರಿ? ಇಂತಹ ಸಂದರ್ಭಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ. ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
-ಎಂ.ಎಚ್.ರಾಜಾರಾಮ್, ಸರಸ್ವತಿಪುರಂ, ಮೈಸೂರು
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…