Andolana originals

ಓದುಗರ ಪತ್ರ: ಶಾಲೆ ಪುನಾರಂಭ; ಪಾಠ ಯಾವಾಗ ಶುರು?

ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರಒತ್ತು ನೀಡಬೇಕು. ಇಲ್ಲದಿದ್ದರೆ ಶಾಲೆಗಳು ಶುರುವಾದರೂ ಪಾಠ ಪ್ರವಚನಗಳು ನಡೆಯದಿದ್ದರೆ ಏನು ಪ್ರಯೋಜನ?

ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಶಾಲಾ ದಾಖಲಾತಿ ಆಂದೋಲನ ನಡೆಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು… ಇಂತಹ ಕಾರ್ಯಗಳನ್ನೂ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಶಿಕ್ಷಕರ ಕೊರತೆ ಇದ್ದೇ ಇರುತ್ತದೆ. ಇಂತಹ ಸಂದಿಗ್ಧತೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಒದಗಿಸುವುದು ಕಷ್ಟಸಾಧ್ಯ. ಖಾಸಗಿ ಶಾಲೆಗಳಿಗೆ ಸ್ವತಃ ಪೋಷಕರೇ ಮಕ್ಕಳನ್ನು ದಾಖಲಿಸುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಮಕ್ಕಳ ಮನೆ ಬಾಗಿಲಿಗೆ ಹೋಗುವುದು ಅನಿವಾರ್ಯ ಎಂಬಂತಾಗಿದೆ.

ಬಹಳಷ್ಟು ಕಡೆ ಏಕೋಪಾಧ್ಯಾಯ ಶಾಲೆಗಳಿವೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಯಾವ ಪೋಷಕರು ಮುಂದೆ ಬರುತ್ತಾರೆ? ಅಲ್ಲದೆ, ಶಾಲೆಗಳಲ್ಲಿ ಪಠ್ಯ ಪುಸ್ತಕಗಳು, ಸಮವಸ್ತ್ರ ಇತ್ಯಾದಿಯನ್ನು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಒದಗಿಸಬೇಕು ನಿಜ. ಆ ಜವಾಬ್ದಾರಿಯನ್ನೂ ಶಿಕ್ಷಕರ ಹೆಗಲಿಗೇ ಹಾಕುವುದು ಎಷ್ಟು ಸರಿ? ಇಂತಹ ಸಂದರ್ಭಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ. ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

-ಎಂ.ಎಚ್.ರಾಜಾರಾಮ್, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

12 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

35 mins ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

1 hour ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

2 hours ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

2 hours ago