Andolana originals

ಓದುಗರ ಪತ್ರ: ಶಾಲೆ ಪುನಾರಂಭ; ಪಾಠ ಯಾವಾಗ ಶುರು?

ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರಒತ್ತು ನೀಡಬೇಕು. ಇಲ್ಲದಿದ್ದರೆ ಶಾಲೆಗಳು ಶುರುವಾದರೂ ಪಾಠ ಪ್ರವಚನಗಳು ನಡೆಯದಿದ್ದರೆ ಏನು ಪ್ರಯೋಜನ?

ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಶಾಲಾ ದಾಖಲಾತಿ ಆಂದೋಲನ ನಡೆಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು… ಇಂತಹ ಕಾರ್ಯಗಳನ್ನೂ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಶಿಕ್ಷಕರ ಕೊರತೆ ಇದ್ದೇ ಇರುತ್ತದೆ. ಇಂತಹ ಸಂದಿಗ್ಧತೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಒದಗಿಸುವುದು ಕಷ್ಟಸಾಧ್ಯ. ಖಾಸಗಿ ಶಾಲೆಗಳಿಗೆ ಸ್ವತಃ ಪೋಷಕರೇ ಮಕ್ಕಳನ್ನು ದಾಖಲಿಸುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಮಕ್ಕಳ ಮನೆ ಬಾಗಿಲಿಗೆ ಹೋಗುವುದು ಅನಿವಾರ್ಯ ಎಂಬಂತಾಗಿದೆ.

ಬಹಳಷ್ಟು ಕಡೆ ಏಕೋಪಾಧ್ಯಾಯ ಶಾಲೆಗಳಿವೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಯಾವ ಪೋಷಕರು ಮುಂದೆ ಬರುತ್ತಾರೆ? ಅಲ್ಲದೆ, ಶಾಲೆಗಳಲ್ಲಿ ಪಠ್ಯ ಪುಸ್ತಕಗಳು, ಸಮವಸ್ತ್ರ ಇತ್ಯಾದಿಯನ್ನು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಒದಗಿಸಬೇಕು ನಿಜ. ಆ ಜವಾಬ್ದಾರಿಯನ್ನೂ ಶಿಕ್ಷಕರ ಹೆಗಲಿಗೇ ಹಾಕುವುದು ಎಷ್ಟು ಸರಿ? ಇಂತಹ ಸಂದರ್ಭಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ. ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

-ಎಂ.ಎಚ್.ರಾಜಾರಾಮ್, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago