Andolana originals

ಓದುಗರ ಪತ್ರ: ಶಾಲೆ ಪುನಾರಂಭ; ಪಾಠ ಯಾವಾಗ ಶುರು?

ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರಒತ್ತು ನೀಡಬೇಕು. ಇಲ್ಲದಿದ್ದರೆ ಶಾಲೆಗಳು ಶುರುವಾದರೂ ಪಾಠ ಪ್ರವಚನಗಳು ನಡೆಯದಿದ್ದರೆ ಏನು ಪ್ರಯೋಜನ?

ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಶಾಲಾ ದಾಖಲಾತಿ ಆಂದೋಲನ ನಡೆಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು… ಇಂತಹ ಕಾರ್ಯಗಳನ್ನೂ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಶಿಕ್ಷಕರ ಕೊರತೆ ಇದ್ದೇ ಇರುತ್ತದೆ. ಇಂತಹ ಸಂದಿಗ್ಧತೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಒದಗಿಸುವುದು ಕಷ್ಟಸಾಧ್ಯ. ಖಾಸಗಿ ಶಾಲೆಗಳಿಗೆ ಸ್ವತಃ ಪೋಷಕರೇ ಮಕ್ಕಳನ್ನು ದಾಖಲಿಸುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಮಕ್ಕಳ ಮನೆ ಬಾಗಿಲಿಗೆ ಹೋಗುವುದು ಅನಿವಾರ್ಯ ಎಂಬಂತಾಗಿದೆ.

ಬಹಳಷ್ಟು ಕಡೆ ಏಕೋಪಾಧ್ಯಾಯ ಶಾಲೆಗಳಿವೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಯಾವ ಪೋಷಕರು ಮುಂದೆ ಬರುತ್ತಾರೆ? ಅಲ್ಲದೆ, ಶಾಲೆಗಳಲ್ಲಿ ಪಠ್ಯ ಪುಸ್ತಕಗಳು, ಸಮವಸ್ತ್ರ ಇತ್ಯಾದಿಯನ್ನು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಒದಗಿಸಬೇಕು ನಿಜ. ಆ ಜವಾಬ್ದಾರಿಯನ್ನೂ ಶಿಕ್ಷಕರ ಹೆಗಲಿಗೇ ಹಾಕುವುದು ಎಷ್ಟು ಸರಿ? ಇಂತಹ ಸಂದರ್ಭಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ. ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

-ಎಂ.ಎಚ್.ರಾಜಾರಾಮ್, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago