Andolana originals

ಓದುಗರ ಪತ್ರ: ಶಾಲೆ ಪುನಾರಂಭ; ಪಾಠ ಯಾವಾಗ ಶುರು?

ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರಒತ್ತು ನೀಡಬೇಕು. ಇಲ್ಲದಿದ್ದರೆ ಶಾಲೆಗಳು ಶುರುವಾದರೂ ಪಾಠ ಪ್ರವಚನಗಳು ನಡೆಯದಿದ್ದರೆ ಏನು ಪ್ರಯೋಜನ?

ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಶಾಲಾ ದಾಖಲಾತಿ ಆಂದೋಲನ ನಡೆಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು… ಇಂತಹ ಕಾರ್ಯಗಳನ್ನೂ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಶಿಕ್ಷಕರ ಕೊರತೆ ಇದ್ದೇ ಇರುತ್ತದೆ. ಇಂತಹ ಸಂದಿಗ್ಧತೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಒದಗಿಸುವುದು ಕಷ್ಟಸಾಧ್ಯ. ಖಾಸಗಿ ಶಾಲೆಗಳಿಗೆ ಸ್ವತಃ ಪೋಷಕರೇ ಮಕ್ಕಳನ್ನು ದಾಖಲಿಸುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಮಕ್ಕಳ ಮನೆ ಬಾಗಿಲಿಗೆ ಹೋಗುವುದು ಅನಿವಾರ್ಯ ಎಂಬಂತಾಗಿದೆ.

ಬಹಳಷ್ಟು ಕಡೆ ಏಕೋಪಾಧ್ಯಾಯ ಶಾಲೆಗಳಿವೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದಕ್ಕೆ ಯಾವ ಪೋಷಕರು ಮುಂದೆ ಬರುತ್ತಾರೆ? ಅಲ್ಲದೆ, ಶಾಲೆಗಳಲ್ಲಿ ಪಠ್ಯ ಪುಸ್ತಕಗಳು, ಸಮವಸ್ತ್ರ ಇತ್ಯಾದಿಯನ್ನು ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಒದಗಿಸಬೇಕು ನಿಜ. ಆ ಜವಾಬ್ದಾರಿಯನ್ನೂ ಶಿಕ್ಷಕರ ಹೆಗಲಿಗೇ ಹಾಕುವುದು ಎಷ್ಟು ಸರಿ? ಇಂತಹ ಸಂದರ್ಭಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ. ಈ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

-ಎಂ.ಎಚ್.ರಾಜಾರಾಮ್, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago