ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ ಅಪೋಲೋ ಆಸ್ಪತ್ರೆ ಸರ್ಕಲ್ ಸೇರಿದಂತೆ ನಗರದ ಹಲವು ಸರ್ಕಲ್ಗಳಲ್ಲಿ ಹಗಲು, ರಾತ್ರಿ ವೇಳೆ ಮಳೆ ಬಂದಾಗಲೂ ಸಿಗ್ನಲ್ ಲೈಟ್ಗಳು ಆನ್ ಆಗಿರುತ್ತವೆ. ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ನಿಂತು ನೆನೆಯಬೇಕಾದ ಅನಿವಾರ್ಯತೆ ಇದೆ. ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದರೂ, ಮಳೆ ಬಂದಾಗ ಸಿಗ್ನಲ್ ಲೈಟ್ಸ್ ಆಫ್ ಆಗುವಂತಹ ಸ್ವಯಂ ಚಾಲಿತ ವ್ಯವಸ್ಥೆಯನ್ನು ಇನ್ನೂ ಜಾರಿಗೊಳಿಸದಿರುವುದು ವಿಪರ್ಯಾಸ. ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಮಳೆ ಬಂದಾಗ ಸಿಗ್ನಲ್ ಲೈಟ್ಗಳನ್ನು ಆಫ್ ಮಾಡುವ ಗೋಜಿಗೂ ಹೋಗುವುದಿಲ್ಲ, ಇದರಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆ ಬಂದಾಗ ಸಿಗ್ನಲ್ ಲೈಟ್ಗಳನ್ನು ಆಫ್ ಮಾಡಲು ಮೈಸೂರು ನಗರ ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…