ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ ಅಪೋಲೋ ಆಸ್ಪತ್ರೆ ಸರ್ಕಲ್ ಸೇರಿದಂತೆ ನಗರದ ಹಲವು ಸರ್ಕಲ್ಗಳಲ್ಲಿ ಹಗಲು, ರಾತ್ರಿ ವೇಳೆ ಮಳೆ ಬಂದಾಗಲೂ ಸಿಗ್ನಲ್ ಲೈಟ್ಗಳು ಆನ್ ಆಗಿರುತ್ತವೆ. ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ನಿಂತು ನೆನೆಯಬೇಕಾದ ಅನಿವಾರ್ಯತೆ ಇದೆ. ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದರೂ, ಮಳೆ ಬಂದಾಗ ಸಿಗ್ನಲ್ ಲೈಟ್ಸ್ ಆಫ್ ಆಗುವಂತಹ ಸ್ವಯಂ ಚಾಲಿತ ವ್ಯವಸ್ಥೆಯನ್ನು ಇನ್ನೂ ಜಾರಿಗೊಳಿಸದಿರುವುದು ವಿಪರ್ಯಾಸ. ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಮಳೆ ಬಂದಾಗ ಸಿಗ್ನಲ್ ಲೈಟ್ಗಳನ್ನು ಆಫ್ ಮಾಡುವ ಗೋಜಿಗೂ ಹೋಗುವುದಿಲ್ಲ, ಇದರಿಂದಾಗಿ ದ್ವಿಚಕ್ರ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆ ಬಂದಾಗ ಸಿಗ್ನಲ್ ಲೈಟ್ಗಳನ್ನು ಆಫ್ ಮಾಡಲು ಮೈಸೂರು ನಗರ ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…