ಓದುಗರ ಪತ್ರ
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ ಖರೀದಿಸಲು ಗಂಟೆ ಗಟ್ಟಲೆ ಸರದಿ ಸಾಲಿನಲ್ಲಿ ಕುಳಿತು ಕಾಯುವ ಸಾರ್ವಜನಿಕರು ಸೆಕೆಯಿಂದ ಪರಿತಪಿಸುವಂತಾಗಿದೆ.
ಎಸಿ ಇಲ್ಲದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ನಾಲ್ಕೈದು ಫ್ಯಾನ್ಗಳನ್ನಾದರೂ ಅಲ್ಲಿ ಅಳವಡಿಸಿದರೆ ಜನರಿಗೆ ಸ್ವಲ್ಪ ನಿರಾಳವಾಗುತ್ತದೆ. ರಿಸರ್ವೇಷನ್ ಕೌಂಟರ್ನಲ್ಲಿ ಕುಡಿಯುವ ನೀರಿನ ವ್ಯವ ಸ್ಥೆಯೂ ಇಲ್ಲದೇ ಬಾಯಾರಿಕೆಯಿಂದ ಬಳಲು ವಂತಾಗುತ್ತದೆ. ರೈಲ್ವೆ ಇಲಾಖೆ ಅಧಿಕಾರಿಗಳು ಕೂಡಲೇ ರಿಸರ್ವೇಷನ್ ಕೌಂಟರ್ನಲ್ಲಿ ಸಾರ್ವಜನಿಕರಿಗೆ ಫ್ಯಾನ್, ಎಸಿ ಹಾಗೂ ಕುಡಿಯವ ನೀರಿನ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…