Andolana originals

ಓದುಗರ ಪತ್ರ: ಅಪಘಾತ ವಿಮಾ ನಿಯಮಗಳಿಗೆ ತಿದ್ದುಪಡಿಯಾಗಲಿ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ ರೂ. ಪರಿಹಾರ ಕೋರಿದ್ದರು. ಹೈ ಕೋರ್ಟ್ ನಿರಾಕರಿಸಿತ್ತು. ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದು ಚಾಲಕನ ತಪ್ಪಿನಿಂದ ಆದ ಅಪಘಾತ, ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರು ತಮ್ಮ ಕಾರಿಗೆ ವಿಮೆ ಮೊತ್ತವನ್ನು ಕಟ್ಟಿದ್ದಾರೆ. ವಿಮೆ ಮಾಡಿಸುವ ಉದ್ದೇಶವೇ ದುಡಿಯುವ ವ್ಯಕ್ತಿ ಅಪಘಾತದಿಂದ ನಿಧನರಾದರೆ ತಮ್ಮ ಕುಟುಂಬಕ್ಕೆ ಪರಿಹಾರ ದೊರೆಯಲಿ ಎಂಬ ಉದ್ದೇಶದಿಂದ. ಹಾಗಿದ್ದರೆ ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂಬ ನಿಯಮ ಏಕೆ? ಟ್ರಾಫಿಕ್ ಪೊಲೀಸರು ವಿಮೆ, ಹೆಲ್ಮೆಟ್ ತಪಾಸಣೆ ಮಾಡುವುದೇಕೆ? ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಾಹನ ಅಪಘಾತದಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪೆನಿಗಳು ಸೂಕ್ತ ಪರಿಹಾರ ನೀಡಲು ವಿಮಾ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಬೇಕು.

– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

8 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

8 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

9 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

10 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

10 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

11 hours ago