Andolana originals

ಓದುಗರ ಪತ್ರ: ಅಪಘಾತ ವಿಮಾ ನಿಯಮಗಳಿಗೆ ತಿದ್ದುಪಡಿಯಾಗಲಿ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ ರೂ. ಪರಿಹಾರ ಕೋರಿದ್ದರು. ಹೈ ಕೋರ್ಟ್ ನಿರಾಕರಿಸಿತ್ತು. ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದು ಚಾಲಕನ ತಪ್ಪಿನಿಂದ ಆದ ಅಪಘಾತ, ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರು ತಮ್ಮ ಕಾರಿಗೆ ವಿಮೆ ಮೊತ್ತವನ್ನು ಕಟ್ಟಿದ್ದಾರೆ. ವಿಮೆ ಮಾಡಿಸುವ ಉದ್ದೇಶವೇ ದುಡಿಯುವ ವ್ಯಕ್ತಿ ಅಪಘಾತದಿಂದ ನಿಧನರಾದರೆ ತಮ್ಮ ಕುಟುಂಬಕ್ಕೆ ಪರಿಹಾರ ದೊರೆಯಲಿ ಎಂಬ ಉದ್ದೇಶದಿಂದ. ಹಾಗಿದ್ದರೆ ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂಬ ನಿಯಮ ಏಕೆ? ಟ್ರಾಫಿಕ್ ಪೊಲೀಸರು ವಿಮೆ, ಹೆಲ್ಮೆಟ್ ತಪಾಸಣೆ ಮಾಡುವುದೇಕೆ? ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಾಹನ ಅಪಘಾತದಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪೆನಿಗಳು ಸೂಕ್ತ ಪರಿಹಾರ ನೀಡಲು ವಿಮಾ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಬೇಕು.

– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

19 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

40 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

43 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 hour ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago