Andolana originals

ಓದುಗರ ಪತ್ರ: ಅಪಘಾತ ವಿಮಾ ನಿಯಮಗಳಿಗೆ ತಿದ್ದುಪಡಿಯಾಗಲಿ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ ರೂ. ಪರಿಹಾರ ಕೋರಿದ್ದರು. ಹೈ ಕೋರ್ಟ್ ನಿರಾಕರಿಸಿತ್ತು. ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದು ಚಾಲಕನ ತಪ್ಪಿನಿಂದ ಆದ ಅಪಘಾತ, ಕುಟುಂಬಕ್ಕೆ ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರು ತಮ್ಮ ಕಾರಿಗೆ ವಿಮೆ ಮೊತ್ತವನ್ನು ಕಟ್ಟಿದ್ದಾರೆ. ವಿಮೆ ಮಾಡಿಸುವ ಉದ್ದೇಶವೇ ದುಡಿಯುವ ವ್ಯಕ್ತಿ ಅಪಘಾತದಿಂದ ನಿಧನರಾದರೆ ತಮ್ಮ ಕುಟುಂಬಕ್ಕೆ ಪರಿಹಾರ ದೊರೆಯಲಿ ಎಂಬ ಉದ್ದೇಶದಿಂದ. ಹಾಗಿದ್ದರೆ ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂಬ ನಿಯಮ ಏಕೆ? ಟ್ರಾಫಿಕ್ ಪೊಲೀಸರು ವಿಮೆ, ಹೆಲ್ಮೆಟ್ ತಪಾಸಣೆ ಮಾಡುವುದೇಕೆ? ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಾಹನ ಅಪಘಾತದಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪೆನಿಗಳು ಸೂಕ್ತ ಪರಿಹಾರ ನೀಡಲು ವಿಮಾ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಬೇಕು.

– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

3 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

3 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

3 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

3 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

3 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

3 hours ago