Andolana originals

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್‌ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್‌ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್‌ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.

– ವಿಜಯ್ ಹೆಮ್ಮಿಗೆ, ಮೈಸೂರು 

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

15 mins ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

2 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

2 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

2 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

2 hours ago