ಓದುಗರ ಪತ್ರ
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…