Andolana originals

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ ನಿರ್ಧಾರ ರಾಜದ್ಯಂತ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಸರ್ಕಾರ ಒತ್ತಾಯಕ್ಕೆ ಮಣಿದು, ಈ ಹಿಂದೆ ತಾನು ಮಾಡಿದ ನಿರ್ಣಯದಂತೆ ಒಂದು ವರ್ಷ ಇದ್ದ ವಯೋಮಿತಿಯನ್ನು ಆರು ವರ್ಷದಿಂದ ಅರವತ್ತು ದಿನಗಳು, ಅಂದರೆ ಈ ಹಿಂದಿನಂತೆಯೇ ೫ ವರ್ಷ ಮತ್ತು ಹತ್ತು ತಿಂಗಳಿಗೆ ಶೈಕ್ಷಣಿಕ ವರ್ಷ ೨೦೨೬-೨೭ರಿಂದಲೇ ಅನ್ವಯವಾಗುವಂತೆ ಸಡಿಲಿಸಿರುವ ನಡೆ ಸ್ವಾಗತಾರ್ಹ. ಸಾಮಾನ್ಯವಾಗಿ ಪೋಷಕರು ಎಲ್‌ಕೆಜಿಗೆ ಸೇರಿಸುವಾಗಲೇ ವಯೋಮಿತಿ ಬಗ್ಗೆ ತಲೆಕಡಿಸಿಕೊಳ್ಳದೇ ನಂತರ ಒಂದನೇ ತರಗತಿಗೆ ಬಂದಾಗ ಪರಿತಪಿಸುವಂತಾಗುತ್ತಿದ್ದು, ಈ ನಿಟ್ಟಿನಲ್ಲಿಯೂ ಸರ್ಕಾರ ಒಂದು ತಿದ್ದುಪಡಿ ಕಾಯಿದೆಯ ಮೂಲಕ ಎಲ್‌ಕೆಜಿ ಪ್ರವೇ ಶಾತಿಗೆ ಮೂರು ವರ್ಷ ಹತ್ತು ತಿಂಗಳೆಂದು ಪರಿಗಣಿಸುವಂತೆ ಮಾಡುತ್ತಿರುವುದಾಗಿ ಶಿಕ್ಷಣ ಸಚಿವರು ಹೇಳಿzರೆ. ಈ ನಿರ್ಧಾರ ಉತ್ತಮವಾದುದು. ಇದರಿಂದಾಗಿ ಎಲ್‌ಕೆಜಿಗೆ ಸೇರಿಸುವಾಗಲೇ ಪೋಷಕರು ಸೂಕ್ತ ನಿರ್ಧಾರ ಕೈಗೊಂಡು ಮುಂದೆ ಮುಜುಗರಕ್ಕೀಡಾಗುವ ಪರಿಸ್ಥಿತಿ ತಪ್ಪಿಸಬಹುದಾಗಿದೆ.

– ವಿಜಯ್ ಹೆಮ್ಮಿಗೆ, ಮೈಸೂರು 

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

19 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago