Andolana originals

ಓದುಗರ ಪತ್ರ: ಮಕ್ಕಳ ಮೇಲೆ AI ದುರುಪಯೋಗ: ಪ್ರತ್ಯೇಕ ಕಾನೂನು ಅಗತ್ಯ

ಭಾರತದಲ್ಲಿ ಮಕ್ಕಳ ಕುರಿತು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವುದು, ಇಂತಹ ವಿಡಿಯೋಗಳನ್ನು ಇಟ್ಟುಕೊಳ್ಳುವುದು ಅಥವಾ ಹಂಚುವುದು ಪೋಕ್ಸೋ ಕಾಯ್ದೆಯಡಿ ಅಪರಾಧ. ಈ ಕಾಯಿದೆ ಮಕ್ಕಳ ರಕ್ಷಣೆಗೆ ಸಹಾಯಕ.

ಆದರೆ ಹೊಸ ತಂತ್ರಜ್ಞಾನ ಅದರಲ್ಲೂ ಎಐಯಿಂದ ಸೃಷ್ಟಿಯಾದ ಡೀಪ್ಛೇಕ್ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು ಇತರ ಕೃತಕ ಚಿತ್ರಗಳ ಬಗ್ಗೆ ನೇರವಾಗಿ ನಿಯಂತ್ರಣ ಮಾಡುವ ಪ್ರತ್ಯೇಕ ಕಾನೂನು ಭಾರತದಲ್ಲಿ ಇನ್ನೂ ಬಂದಿಲ್ಲ. ಇದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳನ್ನು ತೋರಿಸುವ ನಕಲಿ ದೌರ್ಜನ್ಯ ವಿಡಿಯೋಗಳನ್ನು ನಿರ್ಮಿಸುವುದು ಇನ್ನೂ ಗಂಭೀರ ಅಪಾಯ. ಎಐ ಮೂಲ ಚಿತ್ರವನ್ನು ಬದಲಿಸಿ, ನಕಲಿ ದೃಶ್ಯಗಳನ್ನು ಸೇರಿಸುವುದಕ್ಕೆ ತುಂಬಾ ಸುಲಭ.

ಇದರಿಂದ ನೈತಿಕ ಸಮಸ್ಯೆಗಳು, ಕಾನೂನು ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ಕಾರಣಕ್ಕೆ ಎಐ ದುರುಪಯೋಗವೂ ಹೆಚ್ಚಿದೆ. ೨೦೨೫ರಲ್ಲಿ ಸರ್ಕಾರ ಈ ಕುರಿತು ನೂತನ ಕಾನೂನು ತರಲು ಯೋಚಿಸಿದ್ದರೂ ಇಲ್ಲಿಯವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರ ಈಗಲಾದರೂ ಮಕ್ಕಳ ಮೇಲೆ ಎಐ ದುರುಪಯೋಗ ತಡೆಗೆ ಪ್ರತ್ಯೇಕ ಕಾನೂನು ರಚಿಸುವುದು ಅಗತ್ಯವಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

9 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

15 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

15 hours ago