ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತಂದು ಪ್ರಾಥಮಿಕ ಹಂತದಿಂದಲೇ ಎಐ ಸಾಕ್ಷರತೆಯನ್ನು ಕಡ್ಡಾಯಗೊಳಿಸಬೇಕು. ಇದು ಭವಿಷ್ಯದ ಪೀಳಿಗೆಯನ್ನು ಬಳಕೆದಾರರನ್ನಾಗಿ ಮಾಡುವುದು ಮಾತ್ರವಲ್ಲದೆ, ಸೃಷ್ಟಿ ಕರ್ತರನ್ನಾಗಿಯೂ ರೂಪಿಸುತ್ತದೆ.
ಎರಡ ನೆಯದಾಗಿ, ಉದ್ಯೋಗ ನಷ್ಟದ ಭೀತಿಯನ್ನು ಹೋಗಲಾಡಿ ಸಲು ದೊಡ್ಡಮಟ್ಟದ ರೀ-ಸ್ಕಿಲ್ಲಿಂಗ್ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಇದರಿಂದ ಸಾಂಪ್ರದಾಯಿಕ ಕಾರ್ಮಿಕರು ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಮೂರನೆಯದಾಗಿ ಡೇಟಾ ಸುರಕ್ಷತೆ ಮತ್ತು ನೈತಿಕ ಬಳಕೆಗೆ ಸಂಬಂಧಿಸಿದಂತೆ ಬಲಿಷ್ಠ ಕಾನೂನು ಚೌಕಟ್ಟನ್ನು ರೂಪಿಸುವುದು ಅತ್ಯಗತ್ಯ. ಕರ್ನಾಟಕದಂತಹ ರಾಜ್ಯಗಳು ಕನ್ನಡದಂತಹ ಸ್ಥಳೀಯ ಭಾಷೆಗಳಲ್ಲಿ ಎಐ ಮಾದರಿಗಳನ್ನು ಅಭಿವೃದ್ಧಿಪಡಿಸಲು ಸ್ಟಾರ್ಟ್ ಅಪ್ಗಳಿಗೆ ವಿಶೇಷ ಅನುದಾನ ನೀಡಬೇಕು. ಸರ್ಕಾರಿ ಸೇವೆಗಳಲ್ಲಿ ಎಐ ಅಳವಡಿಸಿಕೊಳ್ಳುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಮತ್ತು ಸಾರ್ವಜನಿಕರಿಗೆ ಶೀಘ್ರ ಸೇವೆ ಸಿಗುವಂತೆ ಮಾಡಬೇಕು. ತಂತ್ರಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಬೆರೆಸುವಲ್ಲಿ ಸರ್ಕಾರದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ, ಬೆಂಗಳೂರು
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…