Andolana originals

ಓದುಗರ ಪತ್ರ: ಸರ್ವ ಪಕ್ಷಗಳ ವಿಶ್ವಾಸ ಅಗತ್ಯ

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಲೋಕಸಭೆಗೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಭಾರತಕ್ಕೆ ಹೊಸತೇನಲ್ಲ.

ಸ್ವತಂತ್ರ ಭಾರತದ ಮೊದಲ ಎರಡು ಸಾರ್ವತ್ರಿಕ ಚುನಾವಣೆಗಳ ಜತೆಯಲ್ಲಿಯೇ ವಿವಿಧ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆಗಳು ನಡೆದಿದ್ದವು. ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ದೇಶಕ್ಕೆ ಆರ್ಥಿಕ ಹೊರೆಯು ತಪ್ಪುವುದರ ಜತೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಖರ್ಚನ್ನೂ ಕಡಿಮೆಗೊಳಿಸಬಹುದು. ಇದನ್ನು ಜಾರಿಗೆ ತರಲು ಸಾಂವಿಧಾನಿಕ ಬದಲಾವಣೆಗಳು ಆಗಬೇಕು. ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳನ್ನು ಮರುಹೊಂದಾಣಿಕೆ ಜತೆಗೆ ಕಾನೂನುಬದ್ಧವಾಗಿ ಸಮರ್ಥನೀಯ ಚೌಕಟ್ಟನ್ನು ಕಟ್ಟುವುದು ಅವಶ್ಯ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರದ ಎಲ್ಲ ನಿರ್ಣಯಗಳಿಗೂ ಪರ-ವಿರುದ್ಧದ ಚರ್ಚೆ ಉದ್ಭವಿಸುವುದು ಸಹಜ. ಒಂದು ದೇಶ ಒಂದು ಚುನಾವಣೆ ಜಾರಿಯಾದರೆ ಅದರಿಂದ ಪ್ರಾದೇಶಿಕ ಪಕ್ಷಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದು. ಆದ್ದರಿಂದ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಅವರ ವಿಶ್ವಾಸವನ್ನೂ ಪಡೆದು ಈ ಯೋಜನೆಯನ್ನು ಸರ್ವಾನುಮತದಿಂದ ಅನುಷ್ಠಾನಕ್ಕೆ ತರುವುದು ಸೂಕ್ತ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago