Andolana originals

ಓದುಗರ ಪತ್ರ: ಸರ್ವ ಪಕ್ಷಗಳ ವಿಶ್ವಾಸ ಅಗತ್ಯ

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಲೋಕಸಭೆಗೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಭಾರತಕ್ಕೆ ಹೊಸತೇನಲ್ಲ.

ಸ್ವತಂತ್ರ ಭಾರತದ ಮೊದಲ ಎರಡು ಸಾರ್ವತ್ರಿಕ ಚುನಾವಣೆಗಳ ಜತೆಯಲ್ಲಿಯೇ ವಿವಿಧ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆಗಳು ನಡೆದಿದ್ದವು. ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ದೇಶಕ್ಕೆ ಆರ್ಥಿಕ ಹೊರೆಯು ತಪ್ಪುವುದರ ಜತೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಖರ್ಚನ್ನೂ ಕಡಿಮೆಗೊಳಿಸಬಹುದು. ಇದನ್ನು ಜಾರಿಗೆ ತರಲು ಸಾಂವಿಧಾನಿಕ ಬದಲಾವಣೆಗಳು ಆಗಬೇಕು. ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳನ್ನು ಮರುಹೊಂದಾಣಿಕೆ ಜತೆಗೆ ಕಾನೂನುಬದ್ಧವಾಗಿ ಸಮರ್ಥನೀಯ ಚೌಕಟ್ಟನ್ನು ಕಟ್ಟುವುದು ಅವಶ್ಯ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರದ ಎಲ್ಲ ನಿರ್ಣಯಗಳಿಗೂ ಪರ-ವಿರುದ್ಧದ ಚರ್ಚೆ ಉದ್ಭವಿಸುವುದು ಸಹಜ. ಒಂದು ದೇಶ ಒಂದು ಚುನಾವಣೆ ಜಾರಿಯಾದರೆ ಅದರಿಂದ ಪ್ರಾದೇಶಿಕ ಪಕ್ಷಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದು. ಆದ್ದರಿಂದ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಅವರ ವಿಶ್ವಾಸವನ್ನೂ ಪಡೆದು ಈ ಯೋಜನೆಯನ್ನು ಸರ್ವಾನುಮತದಿಂದ ಅನುಷ್ಠಾನಕ್ಕೆ ತರುವುದು ಸೂಕ್ತ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

andolana

Recent Posts

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

6 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

10 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

17 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago