ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಲೋಕಸಭೆಗೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಭಾರತಕ್ಕೆ ಹೊಸತೇನಲ್ಲ.
ಸ್ವತಂತ್ರ ಭಾರತದ ಮೊದಲ ಎರಡು ಸಾರ್ವತ್ರಿಕ ಚುನಾವಣೆಗಳ ಜತೆಯಲ್ಲಿಯೇ ವಿವಿಧ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆಗಳು ನಡೆದಿದ್ದವು. ಏಕ ಕಾಲದಲ್ಲಿ ಚುನಾವಣೆಗಳನ್ನು ನಡೆಸುವುದರಿಂದ ದೇಶಕ್ಕೆ ಆರ್ಥಿಕ ಹೊರೆಯು ತಪ್ಪುವುದರ ಜತೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಖರ್ಚನ್ನೂ ಕಡಿಮೆಗೊಳಿಸಬಹುದು. ಇದನ್ನು ಜಾರಿಗೆ ತರಲು ಸಾಂವಿಧಾನಿಕ ಬದಲಾವಣೆಗಳು ಆಗಬೇಕು. ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳನ್ನು ಮರುಹೊಂದಾಣಿಕೆ ಜತೆಗೆ ಕಾನೂನುಬದ್ಧವಾಗಿ ಸಮರ್ಥನೀಯ ಚೌಕಟ್ಟನ್ನು ಕಟ್ಟುವುದು ಅವಶ್ಯ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರದ ಎಲ್ಲ ನಿರ್ಣಯಗಳಿಗೂ ಪರ-ವಿರುದ್ಧದ ಚರ್ಚೆ ಉದ್ಭವಿಸುವುದು ಸಹಜ. ಒಂದು ದೇಶ ಒಂದು ಚುನಾವಣೆ ಜಾರಿಯಾದರೆ ಅದರಿಂದ ಪ್ರಾದೇಶಿಕ ಪಕ್ಷಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಬಹುದು. ಆದ್ದರಿಂದ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ಅವರ ವಿಶ್ವಾಸವನ್ನೂ ಪಡೆದು ಈ ಯೋಜನೆಯನ್ನು ಸರ್ವಾನುಮತದಿಂದ ಅನುಷ್ಠಾನಕ್ಕೆ ತರುವುದು ಸೂಕ್ತ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…