Andolana originals

ಓದುಗರ ಪತ್ರ: ಭ್ರಷ್ಟಾಚಾರ ಆರೋಪ; ಸರ್ಕಾರ ಉತ್ತರಿಸಲಿ

ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ಇತ್ತೀಚೆಗೆ ರಾಜ್ಯ ಸರ್ಕಾರ,  ನಗರ ಸ್ಥಳೀಯ  ಸಂಸ್ಥೆಗಳಲ್ಲಿ  ದಿನಗೂಲಿ  ಆಧಾರದ ಮೇಲೆ  ಕೆಲಸ  ಮಾಡುತ್ತಿದ್ದ  ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಕನಿಷ್ಠ ಮೂರರಿಂದ  ಐದು ಲಕ್ಷ ರೂ. ಲಂಚ  ಪಡೆಯುತ್ತಿದೆ   ಎಂದು  ಡಾ.ಬಿ.ಆರ್. ಅಂಬೇಡ್ಕರ್  ಜಯಂತಿ   ಕಾರ್ಯಕ್ರಮದಲ್ಲಿ  ಬಹಿರಂಗವಾಗಿ  ಹೇಳಿದ್ದಾರೆ.   ಇದೇ ಮಾತನ್ನು,  ವಿರೋಧ ಪಕ್ಷದವರು ಹೇಳಿದ್ದರೆ  ಸರ್ಕಾರ  ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಹೊರಟಿರುವುದನ್ನು ಸಹಿಸದೇ ವಿರೋಧ ಪಕ್ಷದವರು  ಮಾತನಾಡುತ್ತಿದ್ದಾರೆ  ಎಂದು ಆಡಳಿತ ಪಕ್ಷದವರು ಆಪಾದಿಸುತ್ತಿದ್ದರು.

ಇತ್ತೀಚೆಗೆ  ರಾಜ್ಯ  ಸರ್ಕಾರದ  ವಿರುದ್ಧ  ಅನೇಕ  ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ.  ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಬಸವರಾಜ ರಾಯರಡ್ಡಿ ಅವರು ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂ.೧ ಎಂದು ಆಪಾದಿಸಿದ್ದರು.  ರಾಜ್ಯ ಗುತ್ತಿಗೆದಾರರ ಸಂಘವು,  ನಮ್ಮ ಬಾಕಿ ಬಿಲ್ ಪಾವತಿಸಲು ಕೆಲವು ಸಚಿವರ ಆಪ್ತರು ಶೇ.   ೬೦ ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು  ಆಪಾದಿಸಿದ್ದರು. ಸರ್ಕಾರದ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದರೂ  ಇದನ್ನು  ಸರ್ಕಾರ ಗಂಭೀರವಾಗಿ   ಪರಿಗಣಿಸಿಯೇ ಇಲ್ಲ

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago