Andolana originals

ಓದುಗರ ಪತ್ರ: ಭ್ರಷ್ಟಾಚಾರ ಆರೋಪ; ಸರ್ಕಾರ ಉತ್ತರಿಸಲಿ

ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಾದ ಕೆ.ಎಸ್. ಬಸವಂತಪ್ಪ ಅವರು ಇತ್ತೀಚೆಗೆ ರಾಜ್ಯ ಸರ್ಕಾರ,  ನಗರ ಸ್ಥಳೀಯ  ಸಂಸ್ಥೆಗಳಲ್ಲಿ  ದಿನಗೂಲಿ  ಆಧಾರದ ಮೇಲೆ  ಕೆಲಸ  ಮಾಡುತ್ತಿದ್ದ  ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಕನಿಷ್ಠ ಮೂರರಿಂದ  ಐದು ಲಕ್ಷ ರೂ. ಲಂಚ  ಪಡೆಯುತ್ತಿದೆ   ಎಂದು  ಡಾ.ಬಿ.ಆರ್. ಅಂಬೇಡ್ಕರ್  ಜಯಂತಿ   ಕಾರ್ಯಕ್ರಮದಲ್ಲಿ  ಬಹಿರಂಗವಾಗಿ  ಹೇಳಿದ್ದಾರೆ.   ಇದೇ ಮಾತನ್ನು,  ವಿರೋಧ ಪಕ್ಷದವರು ಹೇಳಿದ್ದರೆ  ಸರ್ಕಾರ  ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಹೊರಟಿರುವುದನ್ನು ಸಹಿಸದೇ ವಿರೋಧ ಪಕ್ಷದವರು  ಮಾತನಾಡುತ್ತಿದ್ದಾರೆ  ಎಂದು ಆಡಳಿತ ಪಕ್ಷದವರು ಆಪಾದಿಸುತ್ತಿದ್ದರು.

ಇತ್ತೀಚೆಗೆ  ರಾಜ್ಯ  ಸರ್ಕಾರದ  ವಿರುದ್ಧ  ಅನೇಕ  ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ.  ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಬಸವರಾಜ ರಾಯರಡ್ಡಿ ಅವರು ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂ.೧ ಎಂದು ಆಪಾದಿಸಿದ್ದರು.  ರಾಜ್ಯ ಗುತ್ತಿಗೆದಾರರ ಸಂಘವು,  ನಮ್ಮ ಬಾಕಿ ಬಿಲ್ ಪಾವತಿಸಲು ಕೆಲವು ಸಚಿವರ ಆಪ್ತರು ಶೇ.   ೬೦ ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು  ಆಪಾದಿಸಿದ್ದರು. ಸರ್ಕಾರದ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದರೂ  ಇದನ್ನು  ಸರ್ಕಾರ ಗಂಭೀರವಾಗಿ   ಪರಿಗಣಿಸಿಯೇ ಇಲ್ಲ

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

5 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago