Andolana originals

ಓದುಗರ ಪತ್ರ: ಸಣ್ಣ ಕೈಗಾರಿಕೆಗಳ ಇಂಧನ ಬಿಕ್ಕಟ್ಟು ನಿವಾರಿಸಿ

ರಾಜ್ಯದಲ್ಲಿ ೪,೦೦೦ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳು ಮುಚ್ಚುವ ಭೀತಿಯಲ್ಲಿರುವ ವರದಿ ಆತಂಕಕಾರಿ ಸಂಗತಿಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರನೆ ೯೯೩ ರೂ. ಏರಿಕೆಯಾಗಿದ್ದು, ಈಗ ಪ್ರತಿ ಸಿಲಿಂಡರ್‌ಗೆ ೩,೧೫೨ ರೂ. ನೀಡಿ ಖರೀದಿಸುವುದು ಅನಿವಾರ್ಯವಾಗಿದೆ. ಕಾಳಸಂತೆಯಲ್ಲಿ ೪,೫೦೦ ರೂ. ರವರೆಗೆ ಮಾರಾಟವಾಗುತ್ತಿರುವುದು ಸಣ್ಣ ಉದ್ದಿಮೆದಾರರ ಪಾಲಿಗೆ ಮರಣ ಶಾಸನವಾಗಿದೆ. ವಾರಕ್ಕೆ ೨೦ ಸಿಲಿಂಡರ್‌ಗಳು ಅಗತ್ಯವಿರುವ ಘಟಕಗಳಿಗೆ ಕೇವಲ ೩ ಸಿಲಿಂಡರ್‌ಗಳು ಪೂರೈಕೆಯಾಗುತ್ತಿರುವುದು ಉತ್ಪಾದನಾ ಸರಪಳಿಯನ್ನೇ ಕಡಿದುಹಾಕಿದೆ. ಇಂಧನ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದರೂ, ಮುಂಚಿತವಾಗಿ ಮಾಡಿಕೊಂಡ ಒಪ್ಪಂದಗಳಿಂದಾಗಿ ಬೆಲೆ ಏರಿಸಲಾಗದೆ ಉದ್ದಿಮೆಗಳು ನಲುಗುತ್ತಿವೆ. ಜಾಗತಿಕ ಸಂಘರ್ಷಗಳ ನೆಪವೊಡ್ಡಿ ಪೂರೈಕೆ ಸ್ಥಗಿತಗೊಳಿಸಿರುವುದು ಸರಿಯಲ್ಲ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಲಕ್ಷಾಂತರ ಕಾರ್ಮಿಕರ ಜೀವನದ ಮೇಲೆ ಬರೆ ಎಳೆಯುತ್ತಿದೆ. ಸರ್ಕಾರವು ಮಧ್ಯಪ್ರವೇಶಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಎಂ.ಎಸ್.ಎಂ.ಇ. ವಲಯಕ್ಕೆ ವಿಶೇಷ ಇಂಧನ ರಿಯಾಯಿತಿ ನೀಡದಿದ್ದರೆ ರಾಜ್ಯದ ಆರ್ಥಿಕ ಬೆನ್ನೆಲುಬು ಮುರಿಯುವುದರಲ್ಲಿ ಸಂಶಯವಿಲ್ಲ.

-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

10 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

11 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

12 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

12 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

12 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

13 hours ago