Andolana originals

ಓದುಗರ ಪತ್ರ: ಸಣ್ಣ ಕೈಗಾರಿಕೆಗಳ ಇಂಧನ ಬಿಕ್ಕಟ್ಟು ನಿವಾರಿಸಿ

ರಾಜ್ಯದಲ್ಲಿ ೪,೦೦೦ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳು ಮುಚ್ಚುವ ಭೀತಿಯಲ್ಲಿರುವ ವರದಿ ಆತಂಕಕಾರಿ ಸಂಗತಿಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರನೆ ೯೯೩ ರೂ. ಏರಿಕೆಯಾಗಿದ್ದು, ಈಗ ಪ್ರತಿ ಸಿಲಿಂಡರ್‌ಗೆ ೩,೧೫೨ ರೂ. ನೀಡಿ ಖರೀದಿಸುವುದು ಅನಿವಾರ್ಯವಾಗಿದೆ. ಕಾಳಸಂತೆಯಲ್ಲಿ ೪,೫೦೦ ರೂ. ರವರೆಗೆ ಮಾರಾಟವಾಗುತ್ತಿರುವುದು ಸಣ್ಣ ಉದ್ದಿಮೆದಾರರ ಪಾಲಿಗೆ ಮರಣ ಶಾಸನವಾಗಿದೆ. ವಾರಕ್ಕೆ ೨೦ ಸಿಲಿಂಡರ್‌ಗಳು ಅಗತ್ಯವಿರುವ ಘಟಕಗಳಿಗೆ ಕೇವಲ ೩ ಸಿಲಿಂಡರ್‌ಗಳು ಪೂರೈಕೆಯಾಗುತ್ತಿರುವುದು ಉತ್ಪಾದನಾ ಸರಪಳಿಯನ್ನೇ ಕಡಿದುಹಾಕಿದೆ. ಇಂಧನ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದರೂ, ಮುಂಚಿತವಾಗಿ ಮಾಡಿಕೊಂಡ ಒಪ್ಪಂದಗಳಿಂದಾಗಿ ಬೆಲೆ ಏರಿಸಲಾಗದೆ ಉದ್ದಿಮೆಗಳು ನಲುಗುತ್ತಿವೆ. ಜಾಗತಿಕ ಸಂಘರ್ಷಗಳ ನೆಪವೊಡ್ಡಿ ಪೂರೈಕೆ ಸ್ಥಗಿತಗೊಳಿಸಿರುವುದು ಸರಿಯಲ್ಲ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಲಕ್ಷಾಂತರ ಕಾರ್ಮಿಕರ ಜೀವನದ ಮೇಲೆ ಬರೆ ಎಳೆಯುತ್ತಿದೆ. ಸರ್ಕಾರವು ಮಧ್ಯಪ್ರವೇಶಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಎಂ.ಎಸ್.ಎಂ.ಇ. ವಲಯಕ್ಕೆ ವಿಶೇಷ ಇಂಧನ ರಿಯಾಯಿತಿ ನೀಡದಿದ್ದರೆ ರಾಜ್ಯದ ಆರ್ಥಿಕ ಬೆನ್ನೆಲುಬು ಮುರಿಯುವುದರಲ್ಲಿ ಸಂಶಯವಿಲ್ಲ.

-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago