ರಾಜ್ಯದಲ್ಲಿ ೪,೦೦೦ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳು ಮುಚ್ಚುವ ಭೀತಿಯಲ್ಲಿರುವ ವರದಿ ಆತಂಕಕಾರಿ ಸಂಗತಿಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರನೆ ೯೯೩ ರೂ. ಏರಿಕೆಯಾಗಿದ್ದು, ಈಗ ಪ್ರತಿ ಸಿಲಿಂಡರ್ಗೆ ೩,೧೫೨ ರೂ. ನೀಡಿ ಖರೀದಿಸುವುದು ಅನಿವಾರ್ಯವಾಗಿದೆ. ಕಾಳಸಂತೆಯಲ್ಲಿ ೪,೫೦೦ ರೂ. ರವರೆಗೆ ಮಾರಾಟವಾಗುತ್ತಿರುವುದು ಸಣ್ಣ ಉದ್ದಿಮೆದಾರರ ಪಾಲಿಗೆ ಮರಣ ಶಾಸನವಾಗಿದೆ. ವಾರಕ್ಕೆ ೨೦ ಸಿಲಿಂಡರ್ಗಳು ಅಗತ್ಯವಿರುವ ಘಟಕಗಳಿಗೆ ಕೇವಲ ೩ ಸಿಲಿಂಡರ್ಗಳು ಪೂರೈಕೆಯಾಗುತ್ತಿರುವುದು ಉತ್ಪಾದನಾ ಸರಪಳಿಯನ್ನೇ ಕಡಿದುಹಾಕಿದೆ. ಇಂಧನ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದರೂ, ಮುಂಚಿತವಾಗಿ ಮಾಡಿಕೊಂಡ ಒಪ್ಪಂದಗಳಿಂದಾಗಿ ಬೆಲೆ ಏರಿಸಲಾಗದೆ ಉದ್ದಿಮೆಗಳು ನಲುಗುತ್ತಿವೆ. ಜಾಗತಿಕ ಸಂಘರ್ಷಗಳ ನೆಪವೊಡ್ಡಿ ಪೂರೈಕೆ ಸ್ಥಗಿತಗೊಳಿಸಿರುವುದು ಸರಿಯಲ್ಲ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಲಕ್ಷಾಂತರ ಕಾರ್ಮಿಕರ ಜೀವನದ ಮೇಲೆ ಬರೆ ಎಳೆಯುತ್ತಿದೆ. ಸರ್ಕಾರವು ಮಧ್ಯಪ್ರವೇಶಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಎಂ.ಎಸ್.ಎಂ.ಇ. ವಲಯಕ್ಕೆ ವಿಶೇಷ ಇಂಧನ ರಿಯಾಯಿತಿ ನೀಡದಿದ್ದರೆ ರಾಜ್ಯದ ಆರ್ಥಿಕ ಬೆನ್ನೆಲುಬು ಮುರಿಯುವುದರಲ್ಲಿ ಸಂಶಯವಿಲ್ಲ.
-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…