ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆ ಗ್ರಾಮಕ್ಕೆ ಅಲ್ಲಿನ ದೇವಸ್ಥಾನಕ್ಕೆ ಹಾಗೂ ಇತರೆ ಕೆಲಸ ಕಾರ್ಯಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದು, ಸರಿಯಾದ ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.
ಮಾದಾಪರ ಗ್ರಾಮದಿಂದ ಗದ್ದಿಗೆಯು ಕೆಲವೇ ಕಿಮೀ ದೂರದಲ್ಲಿದ್ದು, ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳನ್ನು ಅಲ್ಲಿನ ಕೆಂಡಗಣ್ಣ ಸ್ವಾಮಿ ದೇವಸ್ಥಾನದಲ್ಲಿ ನಡೆಸುವುದು ವಾಡಿಕೆ. ಆದರೆ ಅಲ್ಲಿಗೆ ಮಾದಾಪುರದಿಂದ ಬಸ್ ವ್ಯವಸ್ಥೆ ಇಲ್ಲದಿರುವ ಪರಿಣಾಮ ಜನರು ಮಾದಾಪುರದಿಂದ ಎಚ್. ಡಿ. ಕೋಟೆಗೆ ಬಂದು ಅಲ್ಲಿಂದ ಗದ್ದಿಗೆಗೆ ಹೋಗಬೇಕಿದೆ. ಸದ್ಯ ಮೈಸೂರು-ಮಾದಾಪುರ- ಗದ್ದಿಗೆ ಮಾರ್ಗವಾಗಿ ಹಾಗೂ ಎಚ್. ಡಿ. ಕೋಟೆ-ಮಾದಾಪುರ-ಗದ್ದಿಗೆ ಮಾರ್ಗವಾಗಿ ಬಸ್ ಬಿಡುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ಬಸ್ ವ್ಯವಸ್ಥೆ ಕಲ್ಪಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…