Andolana originals

ಓದುಗರ ಪತ್ರ: ಅಂಬೇಡ್ಕರ್ ನಾಮಫಲಕ ವಿರೂಪ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ

ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಂಬೇಡ್ಕರ್ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಶೋಷಿತ ಸಮುದಾಯಗಳ ಪರವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ದುಡಿದವರು ಡಾ.ಬಿ.ಆರ್.ಅಂಬೇಡ್ಕರ್. ಇಂದು ಅವರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ದೇಶದ ಕಾನೂನು ವ್ಯವಸ್ಥೆ ನಿಂತಿದೆ. ಸಂವಿಧಾನದ ಅಡಿಯಲ್ಲಿಯೇ ಪ್ರತಿಯೊಬ್ಬರೂ ಸಮಾನವಾಗಿ ಬದುಕುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಸಂವಿಧಾನ ಜಾರಿಯಾಗಿ ೭೬ ವರ್ಷಗಳನ್ನು ಪೂರೈಸಿದೆ. ದೇಶ ಬ್ರಿಟಿಷರ ಆಡಳಿತದಿಂದ ಮುಕ್ತಿಪಡೆದು ಮುಕ್ಕಾಲು ಶತಮಾನವೇ ಕಳೆದಿದೆ. ಇಷ್ಟಿದ್ದರೂ ತಳ ಸಮುದಾಯಗಳ ಮೇಲೆ ನಿರಂತರ ಶೋಷಣೆಗಳು, ದಲಿತ ಸಮುದಾಯದ ಮೇಲಿನ ದಬ್ಬಾಳಿಕೆ ನಿರಂತರವಾಗಿ ಮುಂದುವರಿದಿದ್ದು, ಇಂತಹ ಬೆಳವಣಿಗೆಯನ್ನು ಗಮನಿಸಿದರೆ ನಿಜಕ್ಕೂ ದಲಿತ ಸಮುದಾಯಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಅನುಮಾನ ಕಾಡುತ್ತದೆ. ವಿಶ್ವವೇ ಕೊಂಡಾಡುವ ಅಂಬೇಡ್ಕರ್‌ರವರನ್ನು ಭಾರತದಲ್ಲಿಯೇ ಕೆಲ ಕೆಟ್ಟಮನಸ್ಸುಗಳು ವಿರೋಧಿಸುವುದು ವಿಪರ್ಯಾಸವೇ ಸರಿ. ಅಂಬೇಡ್ಕರ್ ಪ್ರತಿಮೆಗಳು ಹಾಗೂ ನಾಮಫಲಕಗಳನ್ನು ಹಾಳುಮಾಡುತ್ತಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

-ಪ್ರಕಾಶ್ ಬುದ್ಧ, ಅಧ್ಯಕ್ಷರು, ಕರ್ನಾಟಕ ಭೀಮ್ ಸೇನೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

18 mins ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

33 mins ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

44 mins ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

1 hour ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

2 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

3 hours ago