ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಂಬೇಡ್ಕರ್ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಶೋಷಿತ ಸಮುದಾಯಗಳ ಪರವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ದುಡಿದವರು ಡಾ.ಬಿ.ಆರ್.ಅಂಬೇಡ್ಕರ್. ಇಂದು ಅವರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ದೇಶದ ಕಾನೂನು ವ್ಯವಸ್ಥೆ ನಿಂತಿದೆ. ಸಂವಿಧಾನದ ಅಡಿಯಲ್ಲಿಯೇ ಪ್ರತಿಯೊಬ್ಬರೂ ಸಮಾನವಾಗಿ ಬದುಕುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಸಂವಿಧಾನ ಜಾರಿಯಾಗಿ ೭೬ ವರ್ಷಗಳನ್ನು ಪೂರೈಸಿದೆ. ದೇಶ ಬ್ರಿಟಿಷರ ಆಡಳಿತದಿಂದ ಮುಕ್ತಿಪಡೆದು ಮುಕ್ಕಾಲು ಶತಮಾನವೇ ಕಳೆದಿದೆ. ಇಷ್ಟಿದ್ದರೂ ತಳ ಸಮುದಾಯಗಳ ಮೇಲೆ ನಿರಂತರ ಶೋಷಣೆಗಳು, ದಲಿತ ಸಮುದಾಯದ ಮೇಲಿನ ದಬ್ಬಾಳಿಕೆ ನಿರಂತರವಾಗಿ ಮುಂದುವರಿದಿದ್ದು, ಇಂತಹ ಬೆಳವಣಿಗೆಯನ್ನು ಗಮನಿಸಿದರೆ ನಿಜಕ್ಕೂ ದಲಿತ ಸಮುದಾಯಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಅನುಮಾನ ಕಾಡುತ್ತದೆ. ವಿಶ್ವವೇ ಕೊಂಡಾಡುವ ಅಂಬೇಡ್ಕರ್ರವರನ್ನು ಭಾರತದಲ್ಲಿಯೇ ಕೆಲ ಕೆಟ್ಟಮನಸ್ಸುಗಳು ವಿರೋಧಿಸುವುದು ವಿಪರ್ಯಾಸವೇ ಸರಿ. ಅಂಬೇಡ್ಕರ್ ಪ್ರತಿಮೆಗಳು ಹಾಗೂ ನಾಮಫಲಕಗಳನ್ನು ಹಾಳುಮಾಡುತ್ತಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.
-ಪ್ರಕಾಶ್ ಬುದ್ಧ, ಅಧ್ಯಕ್ಷರು, ಕರ್ನಾಟಕ ಭೀಮ್ ಸೇನೆ, ಎಚ್.ಡಿ.ಕೋಟೆ ತಾ.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…