Andolana originals

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್ ಮಾಡಿಕೊಂಡಿದ್ದಾರೆ. ಅದರ ಬದಲು ಭಗವಂತನ ಹೆಸರು ಹೇಳಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಡಾ. ಬಿ. ಆರ್. ಅಂಬೇಡ್ಕರ್‌ರವರಿಗೆ ಅಗೌರವ ತೋರಿರುವುದು ಖಂಡನೀಯ. ಅಮಿತ್ ಶಾ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ದೇಶಕ್ಕೆ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಅಜ್ಞಾನವನ್ನು ತೋರಿಸುತ್ತದೆ. ಅಷ್ಟಕ್ಕೂ ಅಮಿತ್ ಶಾ ಇಂದು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್‌ರವರು ಬರೆದ ಸಂವಿಧಾನ ಕಾರಣವೇ ಹೊರತು, ಭಗವಂತನಲ್ಲ ಎಂಬುದನ್ನು ಅವರು ಮರೆಯಬಾರದು. ಸದನದಲ್ಲಿ ಮಾತನಾಡುವಾಗ ಭಾಷೆಯ ಮೇಲೆ ಹಿಡಿತವಿರಬೇಕು. ವಿಶ್ವವೇ ಗೌರವಿಸುವ ಅಂಬೇಡ್ಕರ್ ಬಗ್ಗೆ ಗೌರವಯುತವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಅಗೌರವದಿಂದ ಮಾತನಾಡುವುದು ಸಮಂಜಸವಲ್ಲ. ಸದ್ಯ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಮಿತ್ ಶಾ ಕೂಡಲೇ ಸದನದಲ್ಲಿಯೇ ಕ್ಷಮೆಯಾಚಿಸಬೇಕು.

-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

 

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago