ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್ ಮಾಡಿಕೊಂಡಿದ್ದಾರೆ. ಅದರ ಬದಲು ಭಗವಂತನ ಹೆಸರು ಹೇಳಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಡಾ. ಬಿ. ಆರ್. ಅಂಬೇಡ್ಕರ್ರವರಿಗೆ ಅಗೌರವ ತೋರಿರುವುದು ಖಂಡನೀಯ. ಅಮಿತ್ ಶಾ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ದೇಶಕ್ಕೆ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಅಜ್ಞಾನವನ್ನು ತೋರಿಸುತ್ತದೆ. ಅಷ್ಟಕ್ಕೂ ಅಮಿತ್ ಶಾ ಇಂದು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್ರವರು ಬರೆದ ಸಂವಿಧಾನ ಕಾರಣವೇ ಹೊರತು, ಭಗವಂತನಲ್ಲ ಎಂಬುದನ್ನು ಅವರು ಮರೆಯಬಾರದು. ಸದನದಲ್ಲಿ ಮಾತನಾಡುವಾಗ ಭಾಷೆಯ ಮೇಲೆ ಹಿಡಿತವಿರಬೇಕು. ವಿಶ್ವವೇ ಗೌರವಿಸುವ ಅಂಬೇಡ್ಕರ್ ಬಗ್ಗೆ ಗೌರವಯುತವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಅಗೌರವದಿಂದ ಮಾತನಾಡುವುದು ಸಮಂಜಸವಲ್ಲ. ಸದ್ಯ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಮಿತ್ ಶಾ ಕೂಡಲೇ ಸದನದಲ್ಲಿಯೇ ಕ್ಷಮೆಯಾಚಿಸಬೇಕು.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…