ಓದುಗರ ಪತ್ರ
ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ ಅವರು ಭಾಷೆಗಳ ವಿಷಯದಲ್ಲಿ ದೇಶದಲ್ಲಿನ ವಾಸ್ತವವನ್ನು ಅರಿತಿಲ್ಲ ಎನ್ನುವುದನ್ನು ತೋರಿಸುತ್ತದೆ. ಇಂಗ್ಲಿಷ್ ವಸಾಹತುಶಾಹಿ ಮತ್ತು ಗುಲಾಮಗಿರಿಯ ಭಾಷೆ ಎಂದು ಎಷ್ಟೇ ಬೊಬ್ಬೆ ಹೊಡೆಯಲಿ, ಅದು ಭಾರತದಲ್ಲಿ ಮತ್ತು ಭಾರತೀಯರಲ್ಲಿ ಆಳವಾಗಿ ಬೇರೂರಿದೆ.
ಕೋಟ್ಯಂತರ ಜನರಿಗೆ ದೇಶದ ಹೊರಗೆ ಮತ್ತು ಒಳಗೆ ಬದುಕು ಕಲ್ಪಿಸಿಕೊಳ್ಳಲು ಅವಕಾಶ ನೀಡಿದೆ. ಈ ದೇಶದಿಂದ ಇಂಗ್ಲಿಷ್ ಭಾಷೆಯನ್ನು ಓಡಿಸುವುದು ಕ್ರಿಕೆಟ್ನ್ನು ದೇಶದಿಂದ ಓಡಿಸುವಷ್ಟೇ ಅಸಾಧ್ಯದ ಮಾತು. ೧೯೪೭ರಲ್ಲಿ ಇಂಗ್ಲಿಷ್ ಮತ್ತು ಆಂಗ್ಲರ ವಿರುದ್ಧ ಆಕ್ರೋಶ ಉತ್ತುಂಗದಲ್ಲಿದ್ದಾಗ ಇಂಗ್ಲಿಷ್ ನ್ನು ಓದ್ದೋಡಿಸುವ ಅವಕಾಶವಿತ್ತು. ಆ ಅವಕಾಶ ಮತ್ತೆ ಬರುವುದು ಕೇವಲ ಕನಸು.
-ರಮಾನಂದ ಶರ್ಮಾ, ಬೆಂಗಳೂರು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…