ಓದುಗರ ಪತ್ರ
ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ ಅವರು ಭಾಷೆಗಳ ವಿಷಯದಲ್ಲಿ ದೇಶದಲ್ಲಿನ ವಾಸ್ತವವನ್ನು ಅರಿತಿಲ್ಲ ಎನ್ನುವುದನ್ನು ತೋರಿಸುತ್ತದೆ. ಇಂಗ್ಲಿಷ್ ವಸಾಹತುಶಾಹಿ ಮತ್ತು ಗುಲಾಮಗಿರಿಯ ಭಾಷೆ ಎಂದು ಎಷ್ಟೇ ಬೊಬ್ಬೆ ಹೊಡೆಯಲಿ, ಅದು ಭಾರತದಲ್ಲಿ ಮತ್ತು ಭಾರತೀಯರಲ್ಲಿ ಆಳವಾಗಿ ಬೇರೂರಿದೆ.
ಕೋಟ್ಯಂತರ ಜನರಿಗೆ ದೇಶದ ಹೊರಗೆ ಮತ್ತು ಒಳಗೆ ಬದುಕು ಕಲ್ಪಿಸಿಕೊಳ್ಳಲು ಅವಕಾಶ ನೀಡಿದೆ. ಈ ದೇಶದಿಂದ ಇಂಗ್ಲಿಷ್ ಭಾಷೆಯನ್ನು ಓಡಿಸುವುದು ಕ್ರಿಕೆಟ್ನ್ನು ದೇಶದಿಂದ ಓಡಿಸುವಷ್ಟೇ ಅಸಾಧ್ಯದ ಮಾತು. ೧೯೪೭ರಲ್ಲಿ ಇಂಗ್ಲಿಷ್ ಮತ್ತು ಆಂಗ್ಲರ ವಿರುದ್ಧ ಆಕ್ರೋಶ ಉತ್ತುಂಗದಲ್ಲಿದ್ದಾಗ ಇಂಗ್ಲಿಷ್ ನ್ನು ಓದ್ದೋಡಿಸುವ ಅವಕಾಶವಿತ್ತು. ಆ ಅವಕಾಶ ಮತ್ತೆ ಬರುವುದು ಕೇವಲ ಕನಸು.
-ರಮಾನಂದ ಶರ್ಮಾ, ಬೆಂಗಳೂರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…