ಓದುಗರ ಪತ್ರ
ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ ಅವರು ಭಾಷೆಗಳ ವಿಷಯದಲ್ಲಿ ದೇಶದಲ್ಲಿನ ವಾಸ್ತವವನ್ನು ಅರಿತಿಲ್ಲ ಎನ್ನುವುದನ್ನು ತೋರಿಸುತ್ತದೆ. ಇಂಗ್ಲಿಷ್ ವಸಾಹತುಶಾಹಿ ಮತ್ತು ಗುಲಾಮಗಿರಿಯ ಭಾಷೆ ಎಂದು ಎಷ್ಟೇ ಬೊಬ್ಬೆ ಹೊಡೆಯಲಿ, ಅದು ಭಾರತದಲ್ಲಿ ಮತ್ತು ಭಾರತೀಯರಲ್ಲಿ ಆಳವಾಗಿ ಬೇರೂರಿದೆ.
ಕೋಟ್ಯಂತರ ಜನರಿಗೆ ದೇಶದ ಹೊರಗೆ ಮತ್ತು ಒಳಗೆ ಬದುಕು ಕಲ್ಪಿಸಿಕೊಳ್ಳಲು ಅವಕಾಶ ನೀಡಿದೆ. ಈ ದೇಶದಿಂದ ಇಂಗ್ಲಿಷ್ ಭಾಷೆಯನ್ನು ಓಡಿಸುವುದು ಕ್ರಿಕೆಟ್ನ್ನು ದೇಶದಿಂದ ಓಡಿಸುವಷ್ಟೇ ಅಸಾಧ್ಯದ ಮಾತು. ೧೯೪೭ರಲ್ಲಿ ಇಂಗ್ಲಿಷ್ ಮತ್ತು ಆಂಗ್ಲರ ವಿರುದ್ಧ ಆಕ್ರೋಶ ಉತ್ತುಂಗದಲ್ಲಿದ್ದಾಗ ಇಂಗ್ಲಿಷ್ ನ್ನು ಓದ್ದೋಡಿಸುವ ಅವಕಾಶವಿತ್ತು. ಆ ಅವಕಾಶ ಮತ್ತೆ ಬರುವುದು ಕೇವಲ ಕನಸು.
-ರಮಾನಂದ ಶರ್ಮಾ, ಬೆಂಗಳೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…