Mysore
25
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಓದುಗರ ಪತ್ರ: ಭಾರತೀಯರಿಗೆ ಅಪಮಾನ

ಓದುಗರ ಪತ್ರ

ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡಿದ್ದಾರೆ. ಭಗವಾನ್ ಬುದ್ಧರು ಬೌದ್ಧ ಧರ್ಮದ ಮೂಲಕ ಜಗತ್ತಿಗೆ ಶಾಂತಿಯನ್ನು ಸಾರಿದ್ದಾರೆ.

ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ್ದಲ್ಲದೇ ಗೌತಮ ಬುದ್ಧರ ಪ್ರತಿಮೆಗೆ ಹಾನಿಯುಂಟು ಮಾಡಿದ್ದಾರೆ. ಇದು ಮಹಾಪುರುಷರಿಗೆ ಅಲ್ಲ ಇಡೀ ಭಾರತೀಯರಿಗೆ ಮಾಡಿದ ಅಪಮಾನವಾಗಿದೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಮಹಾಪುರುಷರ ಪ್ರತಿಮೆಗಳಿಗೆ ರಕ್ಷಣೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ.

 -ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ

Tags:
error: Content is protected !!